Slider

ಜಾಹೀರಾತಿಗಾಗಿ ಸಂಪರ್ಕಿಸಿ

ಫೋನ್: 86605 39735

ಉಡುಪಿ ಜಿಲ್ಲೆಯಲ್ಲಿ ಉತ್ತಮ ಲಸಿಕೀಕರಣ: ಜಿಲ್ಲಾಧಿಕಾರಿ ಕೂರ್ಮ ರಾವ್ ಹೇಳಿಕೆ

ಉಡುಪಿ: ಜಿಲ್ಲೆಯಲ್ಲಿ ವ್ಯಾಪಕವಾಗಿ ಹರಡುತ್ತಿರುವ ಕೋವಿಡ್19 ಹತೋಟಿಗೆ ತರುವ ಪ್ರಯುಕ್ತವಾಗಿ ಜಿಲ್ಲೆಯಲ್ಲಿರುವ ಜನರು ಕೋವಿಡ್ ನಿಂದ ಮುಕ್ತವಾಗಲು ಜಿಲ್ಲೆಯಲ್ಲಿರುವ ಎಲ್ಲರಿಗೂ ಲಸಿಕಿಕರಣ ನಡೆಯುತ್ತಿದೆ. ಈ ನಿಟ್ಟಿನಲ್ಲಿ ಜಿಲ್ಲೆಯ ಜನಪ್ರತಿನಿಧಿಗಳು ಮತ್ತು ವಿವಿಧ ಸಂಘ ಸಂಸ್ಥೆಗಳು ನಮಗೆ ಉತ್ತಮ ಸಹಕಾರವನ್ನು ನೀಡುತ್ತಿದ್ದಾರೆ ಎಂದು ಉಡುಪಿ ಜಿಲ್ಲೆಯ ಜಿಲ್ಲಾಧಿಕಾರಿ ಕೂರ್ಮ ರಾವ್ ಎಂ ಹೇಳಿದರು.
ನಗರದ ಅಮ್ಮಣ್ಣಿ ರಾಮಣ್ಣ ಹಾಲ್ ನಲ್ಲಿ ನಡೆಯುತ್ತಿದ್ದ ಕೋವಿಡ್ ಲಸಿಕಿರಣ ಕೇಂದ್ರಕ್ಕೆ ಭೇಟಿ ನೀಡಿ ಅಲ್ಲಿನ ಸಿಧ್ಧತೆಗಳ ಪರಿಶೀಲನೆ ನಡೆಸಿ ಮಾತನಾಡಿದ ಅವರು ಕೊವೀಡ್ 19 ಅಪಾಯದಿಂದ ನಮ್ಮನ್ನು ನಾವು ರಕ್ಷಿಸಿಕೊಳ್ಳುವುದು ಅಗತ್ಯವಾಗಿದೆ. ಜಿಲ್ಲೆಯಲ್ಲಿ ಕೊವೀಡ್ ನಿರ್ಮೂಲನೆ ಮಾಡಲು ಪ್ರತಿಯೊಬ್ಬ ನಾಗರಿಕನು ಲಸಿಕೆ ಪಡೆಯಬೇಕು. ಜಿಲ್ಲೆಯಲ್ಲಿ ಈಗಾಗಲೇ 79% ಕೊವೀಡ್ ಪ್ರಥಮ ಡೋಸ್ ಲಸಿಕೆಯನ್ನು ಜನರಿಗೆ ನೀಡಲಾಗಿದೆ.
ಎಂದು ಹೇಳಿದರು.
ಈ ಸಮಯದಲ್ಲಿ ನಗರಸಭಾ ಸದಸ್ಯರಾದ ರಮೇಶ್ ಕಾಂಚನ್, ವಿಜಯ ಪೂಜಾರಿ, ಡಿ. ಎಚ್. ಒ ನಾಗಭೂಷಣ್ ಉಡುಪ, ಉಡುಪಿ ತಾಲೂಕು ಆರೋಗ್ಯಾಧಿಕಾರಿ ಬಾ. ವಾಸುದೇವ ಉಪಾಧ್ಯಾಯ, ಜಿಲ್ಲಾ ಸರ್ವೆಕ್ಷಣಾಧಿಕಾರಿ ನಾಗರತ್ನ, ಕೊವೀಡ್ ನೋಡಲ್ ಅಧಿಕಾರಿ ಬಾ. ಪ್ರಶಾಂತ್ ಭಟ್. ಮತ್ತು ಕೊವೀಡ್ ಲಸಿಕಾ ನೋಡಲ್ ಅಧಿಕಾರಿ ಎಂ ಜಿ ರಾಯ ಮತ್ತಿತರು ಉಪಸ್ಥಿತರಿದ್ದರು.

ವರದಿ:-UDUPI FIRST
For advertisement contact:-
Call:-+91 86605 39735
           8548870937
                   or
Email us @:- Udupifirst@gmail.com
0

ಕಾಮೆಂಟ್‌ಗಳಿಲ್ಲ

ಕಾಮೆಂಟ್‌‌ ಪೋಸ್ಟ್‌ ಮಾಡಿ

Mega Menu

blogger
© all rights reserved
made with by templateszoo