Slider

ಜಾಹೀರಾತಿಗಾಗಿ ಸಂಪರ್ಕಿಸಿ

ಫೋನ್: 86605 39735

ಕರಾವಳಿಯಲ್ಲಿ ಡಿಸೆಂಬರ್ 3ರವರೆಗೂ ಮಳೆ ಸಾಧ್ಯತೆ ಹವಾಮಾನ ಇಲಾಖೆ ಮುನ್ಸೂಚನೆ30-11-2021

ರಾಜ್ಯದಲ್ಲಿ ವರ್ಷವಿಡಿ ವರುಣನ ಆರ್ಭಟ ಎಂಬಂತೆ ರಾಜ್ಯದ ದಕ್ಷಿಣ ಒಳನಾಡು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಡಿಸೆಂಬರ್ 3 ರವರೆಗೂ ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಹಾಗೂ ದಕ್ಷಿಣ ಒಳನಾಡಿನ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಜಿಲ್ಲೆಗಳಲ್ಲಿ ನ. 30ರಿಂದ ಡಿ. 3ರವರೆಗೆ ಮಳೆಯಾಗುವ ಸಂಭವವಿದೆ.

ಚಿತ್ರದುರ್ಗ, ದಾವಣಗೆರೆ, ಬಳ್ಳಾರಿ ಜಿಲ್ಲೆಗಳಲ್ಲಿ ಡಿ.2ರಂದು ಹೊರತುಪಡಿಸಿ ಉಳಿದ ದಿನಗಳಲ್ಲಿ ಯಾವುದೇ ಮಳೆಯ ಮುನ್ಸೂಚನೆ ಇಲ್ಲ. ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ ಜಿಲ್ಲೆಗಳಲ್ಲಿ ಒಣಹವೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ..

ಸೋಮವಾರ ಉಡುಪಿ ಜಿಲ್ಲೆಯ ಮೂಡಾರು 20 ಮಿ.ಮೀ, ಶಂಕರನಾರಾಯಣ 18 ಮಿ.ಮೀ, ಉಳ್ಳೂರಿನಲ್ಲಿ 17.5 ಮಿ.ಮೀ ಹಾಗೂ ರಾಯಚೂರು ಜಿಲ್ಲೆ ಸಿಂಧನೂರಿನಲ್ಲಿ 7.5 ಮಿ.ಮೀ. ಮಳೆಯಾಗಿದೆ ಎಂದು ತಿಳಿದುಬಂದಿದೆ.
ವರದಿ:-ಉಡುಪಿ ಫಸ್ಟ್
0

ಕಾಮೆಂಟ್‌ಗಳಿಲ್ಲ

ಕಾಮೆಂಟ್‌‌ ಪೋಸ್ಟ್‌ ಮಾಡಿ

Mega Menu

blogger
© all rights reserved
made with by templateszoo