Slider

ಜಾಹೀರಾತಿಗಾಗಿ ಸಂಪರ್ಕಿಸಿ

ಫೋನ್: 86605 39735

ಮೋದಿ ಹೊಗಳಿದ್ದು ಪ್ರಮೋದ್ ಮಧ್ವರಾಜ್ ವೈಯಕ್ತಿಕ ಹೇಳಿಕೆ:-ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕೊಡವೂರು ಸ್ಪಷ್ಟನೆ

ಉಡುಪಿ:-ಇತ್ತೀಚೆಗೆ ನಡೆದ ಪೇಜಾವರ ವಿಶ್ವೇಶತೀರ್ಥ ಸ್ವಾಮೀಜಿ ಅವರ ಪದ್ಮವಿಭೂಷಣ ಪ್ರಶಸ್ತಿಯ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಹೊಗಳಿದ್ದ ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಅವರ ಹೇಳಿಕೆಗೆ ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕೊಡವೂರು ಪ್ರತಿಕ್ರಿಯೆ ನೀಡಿದ್ದಾರೆ.

ಈ ಬಗ್ಗೆ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಅದು ಅವರ ವೈಯಕ್ತಿಕ ಹೇಳಿಕೆಯೇ ಹೊರತು ಪಕ್ಷದ ಅಲ್ಲ ಎಂದು ಕಾಂಗ್ರೆಸ್ ಜಿಲ್ಲಾಧ್ಯಕ್ಷ ಅಶೋಕ್ ಕುಮಾರ್ ಕೊಡವೂರು ತಿಳಿಸಿದ್ದಾರೆ.

ಈ ಹಿಂದೆ ಕೂಡ ಈಗಿನ ರೀತಿಯಲ್ಲೇ ಆಯ್ಕೆ ಮಾಡಲಾಗುತ್ತಿತ್ತು. ಅರ್ಜಿ ಹಾಕಬೇಕಾಗಿಯೂ ಇರಲಿಲ್ಲ. ಜನರ ಸಾಧನೆಯನ್ನು ಶಿಫಾರಸ್ಸು ಮಾಡುವ ವ್ಯವಸ್ಥೆ ಕೂಡ ಇತ್ತು ಎಂದರು.

ಪ್ರಮೋದ್ ಹಲವು ಪ್ರತಿಭಟನೆಯಲ್ಲಿ ಮೋದಿಯನ್ನು ಟೀಕೆ ಕೂಡ ಮಾಡಿದ್ದರು. ಈಗ ಚುನಾವಣೆ ಸಂದರ್ಭದಲ್ಲಿ ಬಿಜೆಪಿಯವರು ಸುಮ್ಮನೆ ವಿವಾದ ಮಾಡಿ ಗೊಂದಲದ ವಾತಾವಾರಣ ಸೃಷ್ಠಿಸುತ್ತಿದ್ದಾರೆ. ಕಳೆದ ಚುನಾವಣೆಯಲ್ಲಿ ಪ್ರಮೋದ್ ಸೋತ ನಂತರ ಕೆಲವೊಂದು ವ್ಯಾತ್ಯಾಸಗಳು ಆಗಿರಬಹುದು. ಆದರೂ ಅವರು ಕಾಂಗ್ರೆಸ್ ನಾಯಕರಾಗಿ ಪಕ್ಷಕ್ಕೆ ಇಂದಿಗೂ ಕೆಲಸ ಮಾಡುತ್ತಿದ್ದಾರೆ ಎಂದು ಅವರು ತಿಳಿಸಿದ್ದಾರೆ.

ವರದಿ:-ಉಡುಪಿ ಫಸ್ಟ್
0

ಕಾಮೆಂಟ್‌ಗಳಿಲ್ಲ

ಕಾಮೆಂಟ್‌‌ ಪೋಸ್ಟ್‌ ಮಾಡಿ

Mega Menu

blogger
© all rights reserved
made with by templateszoo