ಉಡುಪಿ:-ನಗರದ ಹಲವೆಡೆಯ ಜನರು ಅನುಭವಿಸುತ್ತಿದ್ದ ಟ್ರಾಫಿಕ್ ಸಮಸ್ಯೆಗೆ ಹಾಗೂ ವಾಹನ ದಟ್ಟಣೆಗೆ ಶೀಘ್ರ ಮುಕ್ತಿ ದೊರೆಯಲಿದೆ.
ಇನ್ನುಮುಂದೆ ಜನರು ನಿರಾಯಾಸವಾಗಿ ವಾಹನ ದಟ್ಟಣೆಯಿಂದ ಇಲ್ಲದೆ ಪ್ರಯಾಣಿಸಬಹುದಾಗಿದೆ.
ಮಣಿಪಾಲದ ಟೈಗರ್ ಸರ್ಕಲ್ನಲ್ಲಿ ಸುಗಮ ಸಂಚಾರಕ್ಕೆ ಅತ್ಯಾಧುನಿಕ ಸಿಗ್ನಲ್ ಲೈಟ್ ಸ್ಥಾಪಿಸಲಾಗಿದ್ದು, ಪ್ರಾಯೋಗಿಕವಾದ ಪರೀಕ್ಷೆ ನಡೆಸಲಾಗುತ್ತಿದೆ. ಇನ್ನೆರಡು ದಿನದಲ್ಲಿ ಪೂರ್ಣ ವಾಗಿ ಕಾರ್ಯಾಚರಿಸಲಿದೆ.ನಗರದ ಪ್ರಮುಖ ಜಂಕ್ಷನ್ ಗಳಲ್ಲಿ ಸಿಗ್ನಲ್ ಅಳವಡಿಸಬೇಕು ಎನ್ನುವುದು ಸಾರ್ವಜನಿಕರ ಹಲವಾರು ಸಮಯದ ಬೇಡಿಕೆಯೂ ಹೌದು. ಹೀಗಾಗಿ ನಗರದ ಒಟ್ಟು 12 ಪ್ರಮುಖ ಜಂಕ್ಷನ್ ಗಳಲ್ಲಿ ಸಿಗ್ನಲ್ ಲೈಟ್ಸ್ ಅಳವಡಿಸಲಾಗುತ್ತದೆ
ಒಟ್ಟು ಉಡುಪಿಯಲ್ಲಿ ೧೨ ಕಡೆ ಟ್ರಾಫಿಕ್ ಸಿಗ್ನಲ್ ಅಳವಡಿಸಲು ಜಿಲ್ಲಾಡಳಿತ ನಿರ್ಧರಿಸಿದ್ದು, ಅವುಗಳು ಈ ಕೆಳಗಿನಂತಿದೆ.
ಉಡುಪಿಯ ನಗರ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಬರುವ ಕಲ್ಸಂಕ ಜಂಕ್ಷನ್, ಹಳೆ ಡಯಾನಾ ಸರ್ಕಲ್, ಜೋಡುಕಟ್ಟೆ ಜಂಕ್ಷನ್, ಬನ್ನಂಜೆ ನಾರಾಯಣ ಗುರು ಮಂದಿರದ ಬಳಿ ಇರುವ ಜಂಕ್ಷನ್, ಶಿರಿಬೀಡು ಜಂಕ್ಷನ್, ಕರಾವಳಿ ಜಂಕ್ಷನ್, ಅಂಬಾಗಿಲು ಜಂಕ್ಷನ್, ಟೈಗರ್ ಸರ್ಕಲ್, ಕುಂಜಿಬೆಟ್ಟುವಿನ ಎಮ್ ಜಿ ಎಮ್ ಕಾಲೇಜು ಎದುರಿನ ಜಂಕ್ಷನ್ ಮತ್ತು ಎಂಐಟಿ ಜಂಕ್ಷನ್.
ಇವುಗಳು ಅತ್ಯಾಧುನಿಕ ತಂತ್ರಜ್ಞಾನದ ಸಿಗ್ನಲ್ಗಳಾಗಿದ್ದು, ಸಿಗ್ನಲ್ ಕಂಬಗಳಲ್ಲಿ ಟಿವಿ ಡಿಸ್ಪ್ಲೇ ಅಳವಡಿಸಲಾಗಿದೆ.ವಾಹನಗಳು ಸಿಗ್ನಲ್ಗಳಲ್ಲಿ ನಿಂತಾಗ ರಸ್ತೆ ಸುರಕ್ಷತೆ ಆರೋಗ್ಯ ಸಂಬಂಧಿ ಜಾಗೃತಿ ಸಹಿತ ಕಮರ್ಷಿಯಲ್ ಜಾಹೀರಾತುಗಳನ್ನು ಪ್ರಸಾರ ಮಾಡಲಾಗುತ್ತದೆ.
ವರದಿ:-ಉಡುಪಿ ಫಸ್ಟ್
TRENDING
-
ಮಲ್ಪೆ, ಏ. ೧೫: ಮಲ್ಪೆ ಜಂಕ್ಷನ್ ಬಳಿಯ ಜಾಮೀಯಾ ಮಸೀದಿಯ ಶೌಚಾಲಯದಲ್ಲಿ ನವಜಾತ ಶಿಶುವಿನ ಮೃತದೇಹ ಪತ್ತೆಯಾದ ಘಟನೆ ಸೋಮವಾರ ಮಧ್ಯಾಹ್ನ ನಡೆದಿದೆ. ಮಸೀದಿಯ ಮೇನೆಜರ್ ಸುಹೇ...
-
ಉಡುಪಿ: ತೆಂಕಪೇಟೆಯ ಹೋಟೆಲ್ ವೊಂದರ ಮಾಲಕ ಅಜಿತ್ ಕುಮಾರ್(48) ನಾಪತ್ತೆಯಾಗಿದ್ದು, ಉಡುಪಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ತೆಂಕಪೇಟೆಯಲ್ಲಿ ಶ್ರೀರಾಮ ಭವನ ಎಂಬ...
-
ಪ್ರವೀಣ್ ನೆಟ್ಟಾರು ಕೊಲೆ ಮಾಡಿದ ದೇಶದ್ರೋಹಿಗೆ ಮತ್ತೊಬ್ಬ ದೇಶದ್ರೋಹಿ ಮುತ್ತು ಕೊಟ್ಟಿದ್ದಾನೆ. ರಾಜ್ಯದಲ್ಲಿದ್ದಿದ್ದರೆ ಆ ದೇಶದ್ರೋಹಿನ ಗುಂಡಿಕ್ಕಿ ಕೊಲ್ಲುವಂತ ಕೆಲಸ ...
-
ಉಡುಪಿ: ಮಲ್ಪೆಯ ಮಸೀದಿ ಆವರಣದ ಶೌಚಾಲಯದಲ್ಲಿ ನವಜಾತ ಶಿಶು ಶವಪತ್ತೆ ವಿಚಾರವಾಗಿ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಅರುಣ್ ಕುಮಾರ್ ಹೇಳಿಕೆ ನೀಡಿದ್ದಾರೆ. ಮ...
Slider
ಜಾಹೀರಾತಿಗಾಗಿ ಸಂಪರ್ಕಿಸಿ
ಫೋನ್: 86605 39735
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
Mega Menu
blogger
About Us
LABELS
© all rights reserved
made with by templateszoo
Nice
ಪ್ರತ್ಯುತ್ತರಅಳಿಸಿ