Slider

ಜಾಹೀರಾತಿಗಾಗಿ ಸಂಪರ್ಕಿಸಿ

ಫೋನ್: 86605 39735

ಕಾರ್ಕಳ:-ಕೋವಿಡ್‌ಗೆ ಹೆದರಿ ಮಹಿಳೆ ಆತ್ಮಹತ್ಯೆ 20-1-2022

ಕಾರ್ಕಳ : ಕೊರೊನಾ ಭೀತಿಯಿಂದ ಮಹಿಳೆಯೋರ್ವರು ಬೆಂಕಿ ಹಚ್ಚಿಕೊಂಡು ಸಾವಿಗೀಡಾದ ಘಟನೆ ಕಾರ್ಕಳ ತಾಲೂಕಿನ ಹಿರ್ಗಾನ ಗ್ರಾಮದಲ್ಲಿ ನಡೆದಿದೆ. 

ಆತ್ಮಹತ್ಯೆ ಮಾಡಿಕೊಂಡವರ ಪೈಕಿ ಹೊಸಮಾರು ಮನೆ, ನಾರಾಯಣ ಆಚಾರ್ಯರ ಪತ್ನಿ ಲಕ್ಷ್ಮೀ (65) ಎಏದು ತಿಳಿದುಬಂದಿದೆ. 

ಘಟನೆ ಸಂಬಂಧಿಸಿದಂತೆ ತನಗೆ ಕೊರೊನಾ ಬಂದಿದೆ ಎಂದು ಲಕ್ಷ್ಮೀ ಅವರು ಒಂದು ಚೀಟಿಯಲ್ಲಿ ಬರೆದಿದ್ದು, ಡೀಸೆಲ್‌ ಮೈಮೇಲೆ ಸುರಿದುಕೊಂಡು ಬೆಂಕಿ ಹಚ್ಚಿ ಆತ್ಮಹತ್ಯೆ ಮಾಡಿಕೊಂಡಿರುತ್ತಾರೆ. 

ಈ ಕುರಿತು ಕಾರ್ಕಳ ನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮೃತರು ಇಬ್ಬರು ಪುತ್ರರು ಹಾಗೂ ಓರ್ವ ಪುತ್ರಿಯಿದ್ದು ಅವರನ್ನು ಅಗಲಿದ್ದಾರೆ.
0

ಕಾಮೆಂಟ್‌ಗಳಿಲ್ಲ

ಕಾಮೆಂಟ್‌‌ ಪೋಸ್ಟ್‌ ಮಾಡಿ

Mega Menu

blogger
© all rights reserved
made with by templateszoo