Slider

ಜಾಹೀರಾತಿಗಾಗಿ ಸಂಪರ್ಕಿಸಿ

ಫೋನ್: 86605 39735

ಉಡುಪಿ:-ಹಿಜಾಬ್ ಘಟನೆ ಮಾಸುವ ಮುನ್ನವೇ ಮತ್ತೊಂದು ವಿವಾದ , ಮುಸ್ಲಿಂ ವಿದ್ಯಾರ್ಥಿನಿಯರು ಸ್ಕಾರ್ಫ್ ಧರಿಸಿ ಕಾಲೇಜಿಗೆ ಬರುವುದಾದರೆ , ನಾವುಕೇಸರಿ ಶಾಲು ಧರಿಸಿ ಬರುತ್ತೇವೆ ಎಂದು ಪಟ್ಟು ಬಿಡದ ವಿದ್ಯಾರ್ಥಿಗಳು6-1-2022

ಮುಸ್ಲಿಂ ವಿದ್ಯಾರ್ಥಿನಿಯರು ಸ್ಕಾರ್ಫ್ ತೆಗೆಯದ ಹೊರತು ನಾವು ಕೇಸರಿ ಶಾಲು ತೆಗೆಯಲ್ಲ:-ಪಟ್ಟು ಬಿಡದ ವಿದ್ಯಾರ್ಥಿಗಳು

ಉಡುಪಿಯ ಹಿಜಾಬ್ ಘಟನೆ ಮಾಸುವ ಮುನ್ನವೇ ದಕ್ಷಿಣ ಕನ್ನಡ ಕಾಲೇಜೊಂದರಲ್ಲಿ ಸ್ಕಾರ್ಫ್ ಹಾಗೂ ಕೇಸರಿ ಶಾಲು ವಿವಾದ ಸೃಷ್ಟಿಸಿದೆ.

 ದಕ್ಷಿಣ ಕನ್ನಡದ ಕಿನ್ನಿಗೋಳಿ ಸಮೀಪದ ಕಾಲೇಜೊಂದರಲ್ಲಿ ಎಲ್ಲಿಯವರೆಗೆ ಮುಸ್ಲಿಂ ವಿದ್ಯಾರ್ಥಿನಿಯರು ಸ್ಕಾರ್ಫ್ ಧರಿಸಿ ಕಾಲೇಜಿಗೆ ಬರುತ್ತಾರೋ ಅಲ್ಲಿಯವರೆಗೆ ನಾವು ಕೇಸರಿ ಶಾಲು ಧರಿಸಿ ಕಾಲೇಜಿಗೆ ಬರುತ್ತೇವೆ ಎಂದು ಇತರ ವಿದ್ಯಾರ್ಥಿಗಳು ಪಟ್ಟು ಹಿಡಿದಿದ್ದಾರೆ.
ಕಾಲೇಜಿನಲ್ಲಿ ಮುಸ್ಲಿಂ ವಿದ್ಯಾರ್ಥಿನಿಯರು ಸ್ಕಾರ್ಪ್ ಧರಿಸಿ ಹಾಜರಾದ ಕಾರಣ , ಹಿಂದೂ ವಿದ್ಯಾರ್ಥಿ -ವಿದ್ಯಾರ್ಥಿನಿಯರು ಕೇಸರಿ ಶಾಲು ಹಾಕಿ ತರಗತಿಗೆ ಹಾಜರಾಗಿದ್ದಾರೆ 

 ಮುಸ್ಲಿಂ ವಿದ್ಯಾರ್ಥಿನಿಯರು ಸ್ಕಾರ್ಪ್ ತೆಗೆಯುವ ತನಕ ನಾವು ಕೇಸರಿ ಶಾಲು ತೆಗೆಯುವುದಿಲ್ಲ ಎಂದು ಇತರ ವಿದ್ಯಾರ್ಥಿಗಳು ಪಟ್ಟು ಹಿಡಿದಿದ್ದಾರೆ.

ನಮಗೆ ಹಿಂದು ಸಂಘಟನೆಗಳಾದ ಬಜರಂಗದಳ , ವಿಶ್ವಹಿಂದೂಪರಿಷತ್ , ಎಬಿವಿಪಿ ಬೆಂಬಲ ಸೂಚಿಸಿದೆ ಎಂದು ವಿದ್ಯಾರ್ಥಿಗಳು ಹೇಳಿದ್ದಾರೆ .
ವರದಿ:-ಉಡುಪಿ ಫಸ್ಟ್
0

ಕಾಮೆಂಟ್‌ಗಳಿಲ್ಲ

ಕಾಮೆಂಟ್‌‌ ಪೋಸ್ಟ್‌ ಮಾಡಿ

Mega Menu

blogger
© all rights reserved
made with by templateszoo