Slider

ಜಾಹೀರಾತಿಗಾಗಿ ಸಂಪರ್ಕಿಸಿ

ಫೋನ್: 86605 39735

ಕೋಟ:-ಬೈಕ್ ಢಿಕ್ಕಿ ರಸ್ತೆ ದಾಟಲು ನಿಂತಿದ್ದ ವ್ಯಕ್ತಿ ಸಾವು7-1-2022

ಕೋಟ : ತೆಕ್ಕಟ್ಟೆ ಗ್ರಾಮದ ತೆಕ್ಕಟ್ಟೆ ಹನುಮಾನ್ ರೈಸ್ ಎದುರು ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಜ.5 ರ ಬೆಳಿಗ್ಗೆ ಬೈಕ್ ಢಿಕ್ಕಿ ಹೊಡೆದ ಪರಿಣಾಮ ರಸ್ತೆ ದಾಟಲು ನಿಂತಿದ್ದ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ನಡೆದಿದೆ.

ಮೃತರ ಕುರಿತು ಮೃತರನ್ನು ಕೃಷ್ಣಾನಂದ ಶ್ಯಾನುಭಾಗ್ (85) ಎಂದು ಗುರುತಿಸಲಾಗಿದೆ.

ಬೈಕ್ ಸವಾರ ಮಹಮದ್ ಲತೀಫ್ ಗಾಯಗೊಂಡು ಉಡುಪಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಘಟನೆಯ ಕುರಿತಂತೆ ಇವರು ರಸ್ತೆ ದಾಟಲು ಡಿವೈಡರ್ ಬಳಿ ನಿಂತುಕೊಂಡಿರುವಾಗ ಕುಂದಾಪುರ ಕಡೆಯಿಂದ ಉಡುಪಿ ಕಡೆಗೆ ಹೋಗುತ್ತಿದ್ದ ಬೈಕ್ ಢಿಕ್ಕಿ ಹೊಡೆಯಿತ್ತೆನ್ನಲಾಗಿದೆ.

 ಇದರಿಂದ ಬೈಕ್ ಸವಾರ ಹಾಗೂ ಕೃಷ್ಣಾನಂದ ಶ್ಯಾನುಭಾಗ್ ರಸ್ತೆಗೆ ಬಿದ್ದರೆನ್ನಲಾಗಿದೆ. ಇದರಿಂದ ಗಂಭೀರವಾಗಿ ಗಾಯಗೊಂಡ ಕೃಷ್ಣಾನಂದ ಶ್ಯಾನುಭಾಗ್ ಚಿಕಿತ್ಸೆ ಫಲಕಾರಿಯಾಗದೆ ಮಧ್ಯಾಹ್ನ ಮಣಿಪಾಲ ಆಸ್ಪತ್ರೆಯಲ್ಲಿ ಮೃತಪಟ್ಟರು.

 ಈ ಕುರಿತು ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವರದಿ:-ಉಡುಪಿ ಫಸ್ಟ್
0

ಕಾಮೆಂಟ್‌ಗಳಿಲ್ಲ

ಕಾಮೆಂಟ್‌‌ ಪೋಸ್ಟ್‌ ಮಾಡಿ

Mega Menu

blogger
© all rights reserved
made with by templateszoo