Slider

ಜಾಹೀರಾತಿಗಾಗಿ ಸಂಪರ್ಕಿಸಿ

ಫೋನ್: 86605 39735

ಶರಿಯತ್ ಕಾನೂನು ಒಪ್ಪುವುದಾದರೆ ಹರ್ಷನ ಕೊಂದವರನ್ನು ಹೊಡೆದು ಸಾಯಿಸಿ:-ಶಾಸಕ ರಘುಪತಿ ಭಟ್ ಹೇಳಿಕೆ 27-2-2022

ಕೊಲೆಗಡುಕರಿಗೆ ಶರಿಯತ್ ಕಾನೂನು ಪ್ರಕಾರ ಶಿಕ್ಷೆ ನೀಡುತ್ತೀರಾ? ಶರಿಯತ್ ಪ್ರಕಾರ ಶಿಕ್ಷೆ ನೀಡಿದರೆ ಹಿಜಾಬ್ ಧರಿಸಲು ಅವಕಾಶ ಕೊಡಬಹುದು. ಕಠಿಣ ಶಿಕ್ಷೆ ಬೇಡ, ತರಗತಿಯಲ್ಲಿ ಹಿಜಾಬ್ ಬೇಕು ಎಂದರೆ ಅದು ಆಗೋದಿಲ್ಲ ಎಂದು ಶಾಸಕ ರಘುಪತಿ ಭಟ್ ಹೇಳಿದ್ದಾರೆ.

ಉಡುಪಿ: ಶಿವಮೊಗ್ಗದಲ್ಲಿ ಫೆಬ್ರವರಿ 20 ರಂದು ನಡೆದ ಬಜರಂಗದಳ ಕಾರ್ಯಕರ್ತ ಹರ್ಷ ಕೊಲೆ ಪ್ರಕರಣ ಖಂಡಿಸಿ ಉಡುಪಿ ಜಿಲ್ಲಾ ಬಿಜೆಪಿಯಿಂದ ಪ್ರತಿಭಟನೆ ನಡೆಯಿತು.

ಈ ವೇಳೆ ಮಾತನಾಡಿದ ಶಾಸಕ ರಘುಪತಿ ಭಟ್​​​, ಶರಿಯತ್ ಕಾನೂನನ್ನು ಪಾಲಿಸಲು ತಯಾರು ಇರುವವರು, ಹರ್ಷನನ್ನು ಕೊಂದ ಆರೋಪಿಗಳನ್ನು ಸಾರ್ವಜನಿಕವಾಗಿ ಕಲ್ಲು ಹೊಡೆದು ಸಾಯಿಸಬೇಕು. ಕೊಲೆಗಡುಕರಿಗೆ ಶರಿಯತ್ ಕಾನೂನು ಪ್ರಕಾರ ಶಿಕ್ಷೆ ನೀಡುತ್ತೀರಾ? ಶರಿಯತ್ ಪ್ರಕಾರ ಶಿಕ್ಷೆ ನೀಡಿದರೆ ಹಿಜಾಬ್ ಧರಿಸಲು ಅವಕಾಶ ಕೊಡಬಹುದು. ಕಠಿಣ ಶಿಕ್ಷೆ ಬೇಡ, ತರಗತಿಯಲ್ಲಿ ಹಿಜಾಬ್ ಬೇಕು ಎಂದರೆ ಅದು ಆಗೋದಿಲ್ಲ. ನಿಮ್ಮ ನಿಲುವು ಸ್ಪಷ್ಟಪಡಿಸಿ, ಹಿಜಾಬ್​​​ ವಿಚಾರದಲ್ಲಿ ನಿಲುವೇನು? ಹರ್ಷ ಕೊಲೆಯಲ್ಲಿ ನಿಲುವೇನು? ದುಬೈ, ಸೌದಿಗಳಲ್ಲಿ ಶರಿಯತ್ ಕಾನೂನು ಇದ್ದರೂ ಆಧುನಿಕತೆಯನ್ನು ಒಪ್ಪಿಕೊಳ್ಳಲಾಗುತ್ತಿದೆ ಎಂದರು.
0

ಕಾಮೆಂಟ್‌ಗಳಿಲ್ಲ

ಕಾಮೆಂಟ್‌‌ ಪೋಸ್ಟ್‌ ಮಾಡಿ

Mega Menu

blogger
© all rights reserved
made with by templateszoo