Slider

ಜಾಹೀರಾತಿಗಾಗಿ ಸಂಪರ್ಕಿಸಿ

ಫೋನ್: 86605 39735

ಗುರಾಯಿಸಿದ್ದಕ್ಕೆ ಚಾಕುವಿನಿಂದ ಇರಿದು ಯುವಕನ ಕೊಲೆ 24-4-2022

 


ಬೆಂಗಳೂರು : ಕೆಂಗೇರಿಯಲ್ಲಿ ನಡೆಯುತ್ತಿದ್ದ ಕರಗದ ವೇಳೆ ಗುರಾಯಿಸಿದ ಎಂಬ ಕಾರಣಕ್ಕೆ ಯುವಕನೊಬ್ಬನನ್ನು ಬರ್ಬರವಾಗಿ ಕೊಲೆ ಮಾಡಿದ್ದಾರೆ.


ಸ್ನೇಹಿತರ ಜೊತೆ ಕೆಂಗೇರಿ ಕರಗ ನೋಡಲು ಬಂದಿದ್ದ ಭರತ್​ ಕೊಲೆಯಾದವ. ಬೈಕ್ ಟಚ್ ಆಯ್ತು ಅಂತಾ ಯುವಕರ ಗುಂಪೊಂದು ಭರತ್​ ಜೊತೆ ಕಿರಿಕ್ ಮಾಡಿದೆ.


ಈ ವೇಳೆ ಭರತ್ ಗುರಾಯಿಸಿದ್ದಾನೆ ಎನ್ನಲಾಗಿದೆ. ಇಷ್ಟಕ್ಕೆ ಸಿಟ್ಟಿಗೆದ್ದ ಯುವಕರು ಜಗಳ ಆರಂಭಿಸಿದ್ದಾರೆ. 10 ಜನ ಯುವಕರನ್ನು ಕರೆಸಿದ ಪುಂಡರ ಗುಂಪು ಭರತ್​ಗೆ ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾರೆ


ಕೆಂಗೇರಿ ರೈಲ್ವೆ ಟ್ರ್ಯಾಕ್ ಬಳಿ ಈ ಘಟನೆ ನಡೆದಿದ್ದು, ರೈಲ್ವೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ತಡರಾತ್ರಿ 2 ಗಂಟೆ ಸುಮಾರಿಗೆ ಘಟನೆ ನಡೆದಿದೆ. ರೈಲ್ವೆ ಸಿಬ್ಬಂದಿ ಯುಡಿಆರ್ ಪ್ರಕರಣವೊಂದರ ಪರಿಶೀಲನೆ ನಡೆಸುವಾಗ ಗುಂಪಾಗಿ ಗ್ಯಾಂಗ್​​ವೊಂದು ದೇಹ ಎಳೆದುಕೊಂಡು ಹೋಗ್ತಿರೋದು ಕಂಡು ಬಂದಿದೆ.


ಆ ವೇಳೆ ರೈಲ್ವೆ ಸಿಬ್ಬಂದಿ ಅವರ ಬಳಿ ಹೋಗಲು ಮುಂದಾದಾಗ ಆರೋಪಿಗಳು ಮೃತದೇಹ ಬಿಟ್ಟು ಪರಾರಿಯಾಗಿದ್ದಾರೆ. ಈ ಸಂಬಂಧ ರೈಲ್ವೆ ಎಸ್ಪಿ ಸಿರಿಗೌರಿ ಮಾಹಿತಿ ನೀಡಿದ್ದಾರೆ.





0

ಕಾಮೆಂಟ್‌ಗಳಿಲ್ಲ

ಕಾಮೆಂಟ್‌‌ ಪೋಸ್ಟ್‌ ಮಾಡಿ

Mega Menu

blogger
© all rights reserved
made with by templateszoo