ಬ್ರಹ್ಮಾವರ : ಉಡುಪಿ ಜಿಲ್ಲೆಯ ಮಂದಾರ್ತಿ ಸಮೀಪ ಹೆಗ್ಗುಂಜೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಕೊತ್ತೂರು ಎಂಬಲ್ಲಿ ನಿರ್ಜನ ಪ್ರದೇಶದ ಕಾಡಿನ ರಸ್ತೆಯಲ್ಲಿ ಸುಟ್ಟುಹೋದ ಕಾರು ಹಾಗೂ ಎರಡು ಮೃತದೇಹ ಪತ್ತೆಯಾಗಿದೆ.
ಇನ್ನು ಘಟನೆಗೆ ಸಂಬಂಧಿಸಿದಂತೆ ಆದಿತ್ಯವಾರ ಮುಂಜಾನೆ 3:30 ರ ಸುಮಾರಿಗೆ ಬೆಂಕಿ ಹೊತ್ತಿ ಉರಿಯುವುದನ್ನು ನೋಡಿದ ಸ್ಥಳೀಯರು ವಿದ್ಯುತ್ ಅವಘಡ ಆಗಿರಬಹುದೇ ಎಂದು ಎದ್ದು ಬಂದು ನೋಡಿದರೆ ಹೊತ್ತಿ ಉರಿಯುವ ಕಾರು ಪತ್ತೆಯಾಗಿದೆ.
ಪೊಲೀಸರು ಬೆರಳಚ್ಚು ವಿಧಿವಿಜ್ಞಾನ ತಂಡವು ಸ್ಥಳಕ್ಕೆ ಭೇಟಿಕೊಟ್ಟು ಪರಿಶೀಲನೆಯಲ್ಲಿ ತೊಡಗಿಕೊಂಡಿದ್ದು ಕಾರಿನಲ್ಲಿದ್ದವರು ಯಾರು? ಎಲ್ಲಿಂದ ಬಂದವರು? ಅಪಘಾತವೇ?, ಆತ್ಮಹತ್ಯೆಯೇ? ಎಂಬುದು ಮುಂದೆ ನಡೆಯುವ ತನಿಖೆಯಿಂದ ತಿಳಿದು ಬರಬೇಕು.
ಕಾಮೆಂಟ್ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ