Slider

ಜಾಹೀರಾತಿಗಾಗಿ ಸಂಪರ್ಕಿಸಿ

ಫೋನ್: 86605 39735

ಕಾಂಗ್ರೆಸ್‌ಗೆ ಮುಖ್ಯಮಂತ್ರಿ ಚಂದ್ರು ಗುಡ್‌ಬೈ..29-5-2022

 


ಬೆಂಗಳೂರು: ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ಹಿರಿಯ ಮುಖಂಡ ಮುಖ್ಯಮಂತ್ರಿ ಚಂದ್ರು ಇಂದು ರಾಜೀನಾಮೆ ನೀಡಿದ್ದಾರೆ.



ಈ ಬಗ್ಗೆ ಅಧಿಕೃತವಾಗಿ ಕೆಪಿಸಿಸಿ ಅಧ್ಯಕ್ಷ ಡಿಕೆ. ಶಿವಕುಮಾರ್ ಅವರಿಗೆ ರಾಜೀನಾಮೆ ಪತ್ರ ರವಾನಿಸಿದ್ದಾರೆ. ಹಿರಿಯ ಮುಖಂಡ ಮುಖ್ಯಮಂತ್ರಿ ಚಂದ್ರು ರಾಜ್ಯಸಭೆ ಟಿಕೆಟ್ ನಿರೀಕ್ಷೆಯಲ್ಲಿದ್ದರು. ಆದರೆ ನಿರೀಕ್ಷೆಯಂತೆ ಇವರಿಗೆ ರಾಜ್ಯಸಭೆ ಟಿಕೆಟ್ ಸಿಕ್ಕಿರಲಿಲ್ಲ. ಇದರ ಬೆನ್ನಲ್ಲೆ ವೈಯಕ್ತಿಕ ಕಾರಣಗಳನ್ನು ನೀಡಿ ಪಕ್ಷಕ್ಕೆ ರಾಜೀನಾಮೆಯನ್ನು ಸಲ್ಲಿಸಿದ್ದಾರೆ.



ಈ ಬಗ್ಗೆ ಮಾತನಾಡಿ, ಪಕ್ಷಕ್ಕೆ ಪ್ರಾಮಾಣಿಕ ಸೇವೆ ಸಲ್ಲಿಸಿದ್ದೇನೆ. ಸಾಂಸ್ಕೃತಿಕ ಘಟಕದ ಅಧ್ಯಕ್ಷನಾಗಿ ಜವಾಬ್ದಾರಿಯನ್ನು ನಿರ್ವಹಿಸಿದ್ದೇನೆ. ಆದರೂ ಪಕ್ಷ ಗುರುತಿಸಿರಲಿಲ್ಲ ಎಂದು ರಾಜೀನಾಮೆ ನೀಡುವ ಮೂಲಕ ಪರೋಕ್ಷ ಅಸಮಾಧಾನ ತೋರಿದ್ದಾರೆ. ಅಷ್ಟೇ ಅಲ್ಲದೇ ಕಾಂಗ್ರೆಸ್ ನಾಯಕರ ವಿರುದ್ಧ ಮುಖ್ಯಮಂತ್ರಿ ಚಂದ್ರು ಬೇಸರ ವ್ಯಕ್ತಪಡಿಸಿದ್ದಾರೆ.






0

ಕಾಮೆಂಟ್‌ಗಳಿಲ್ಲ

ಕಾಮೆಂಟ್‌‌ ಪೋಸ್ಟ್‌ ಮಾಡಿ

Mega Menu

blogger
© all rights reserved
made with by templateszoo