ಬೀದರ್: ಅಯೋಧ್ಯೆಗೆ ತೆರಳುತ್ತಿದ್ದ ಬೀದರ್ನ ಒಂದೇ ಕುಟುಂಬದ 7 ಜನರು ಉತ್ತರ ಪ್ರದೇಶದ ಲಖೀಂಪುರ ಖೇರಿ ಬಳಿ ಹೆದ್ದಾರಿಯಲ್ಲಿ ಅಪಘಾತದಲ್ಲಿ ಮೃತಪಟ್ಟಿದ್ದಾರೆ.
ಶಿವಕುಮಾರ್(28), ಜಗದಾಂಬಾ(52), ಮನ್ಮಥ(36), ಅನಿಲ್(30) ಸಂತೋಷ(29), ಶಶಿಕಲಾ(38), ಸರಸ್ವತಿ(42) ಮೃತರು. ಘಟನೆಯಲ್ಲಿ ಹಲವರ ಸ್ಥಿತಿ ಗಂಭೀರವಾಗಿದೆ.
ಬೀದರ್ನ ಪ್ರವಾಸಿಗರು ತೆರಳುತ್ತಿದ್ದ ಟಿಟಿಗೆ ಲಾರಿ ಡಿಕ್ಕಿಯಾಗಿದೆ. ಈ ವೇಳೆ ಟಿಟಿ ವಾಹನದಲ್ಲಿದ್ದ 7 ಜನರು ಮೃತಪಟ್ಟಿದ್ದರೆ, 9 ಜನರಿಗೆ ಗಂಭೀರ ಗಾಯವಾಗಿದೆ.
ಗಾಯಾಳುಗಳಿಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಕಾಮೆಂಟ್ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ