Slider

ಜಾಹೀರಾತಿಗಾಗಿ ಸಂಪರ್ಕಿಸಿ

ಫೋನ್: 86605 39735

ಉದ್ಯಮಿ ಕಟ್ಟೆ ಭೋಜಣ್ಣ ಆತ್ಮಹತ್ಯೆ ಪ್ರಕರಣ; ಆರೋಪಿ ಗಣೇಶ್‌ ಶೆಟ್ಟಿ ಜಾಮೀನಿಗೆ ಅರ್ಜಿ ಸಲ್ಲಿಕೆ

ಕುಂದಾಪುರ: ಚಿನ್ಮಯಿ ಆಸ್ಪತ್ರೆ ಮಾಲೀಕ ಉದ್ಯಮಿ ಕಟ್ಟೆ ಭೋಜಣ್ಣ (79) ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದ ಆರೋಪಿ ಮೊಳಹಳ್ಳಿ ಗಣೇಶ್ ಶೆಟ್ಟಿ ಕುಂದಾಪುರದ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ಸೋಮವಾರ ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದಾನೆ.
ಉದ್ಯಮಿ ಕೊಟ್ಟೆ ಭೋಜಣ್ಣ ಅವರು ಆತ್ಮಹತ್ಯೆಗೆ ಶರಣಾಗಲು ಪ್ರಚೋದನೆ ನೀಡಿದ ಆರೋಪದ ಮೇಲೆ ಆರೋಪಿ ಗಣೇಶ್‌ ಶೆಟ್ಟಿಯನ್ನು ಶುಕ್ರವಾರ ಬಂಧಿಸಲಾಗಿತ್ತು. ಆತನ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದರಿಂದ ಉಡುಪಿ ಅಜ್ಜರಕಾಡಿನ ಸರ್ಕಾರಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು. 

ಆರೋಪಿ ಗಣೇಶ್‌ ಶೆಟ್ಟಿ ಪರ ವಕಾಲತ್ತನ್ನು ಕುಂದಾಪುರದ ವಕೀಲರಾದ ಕೆ.ಸಿ. ಶೆಟ್ಟಿ, ಟಿ.ಬಿ. ಶೆಟ್ಟಿ ಮತ್ತು ದಿನೇಶ್‌ ವಹಿಸಿದ್ದಾರೆ. ಇನ್ನು ನ್ಯಾಯಾಧೀಶ ಅಬ್ದುಲ್‌ ರಹೀಮ್‌ ಹುಸೇನ್‌ ಶೇಖ್‌ ಅವರು ಜೂ.1ಕ್ಕೆ ಅರ್ಜಿ ವಿಚಾರಣೆ ಮುಂದೂಡಿದ್ದು, ಇದಕ್ಕೆ ಪ್ರತಿಯಾಗಿ ಜೂ. 1 ಕ್ಕೆ ಸರ್ಕಾರಿ ಅಭಿಯೋಜಕರ ಆಕ್ಷೇಪಣೆ ಸಲ್ಲಿಕೆಗೆ ಅವಕಾಶ ನೀಡಿದ್ದಾರೆ. 
ಇನ್ನು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೋರ್ವ ಆರೋಪಿ ಬ್ರೋಕರ್‌ ಇಸ್ಮಾಯಿಲ್‌ ತಲೆಮರೆಸಿಕೊಂಡಿದ್ದಾನೆ. ಆತನ ಪತ್ತೆಗಾಗಿ ಕುಂದಾಪುರ ಠಾಣಾ ಪೊಲೀಸರು ಶೋಧ ಕಾರ್ಯ ಮುಂದುವರಿಸಿದ್ದಾರೆ.

0

ಕಾಮೆಂಟ್‌ಗಳಿಲ್ಲ

ಕಾಮೆಂಟ್‌‌ ಪೋಸ್ಟ್‌ ಮಾಡಿ

Mega Menu

blogger
© all rights reserved
made with by templateszoo