ಬೈಂದೂರು: ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಗೆ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲಾ ಕಟ್ಟಡ ಕುಸಿದ ಘಟನೆ ಬೈಂದೂರು ತಾಲೂಕಿನ ಉಪ್ಪುಂದ ಗ್ರಾ.ಪಂ ವ್ಯಾಪ್ತಿಯ ಅಮ್ಮನವರ ತೊಪ್ಲು ಎಂಬಲ್ಲಿ ನಡೆದಿದೆ.
ಅಂದಾಜು 15ವರ್ಷ ಹಿಂದಿನ ಮೂರು ಕೊಠಡಿಗಳುಳ್ಳ ಶಾಲೆ ಇದಾಗಿದ್ದು, ಕಟ್ಟಡದ ಮೇಲ್ಮಾಡು ಸಹಿತ ಗೋಡೆಗಳು ಕುಸಿದಿದೆ. ಶಾಲೆಗೆ ರಜೆಯಿದ್ದ ಕಾರಣ ಹಾಗೂ ಸಂಜೆ ವೇಳೆ ಶಾಲಾ ಕಟ್ಟಡ ಕುಸಿದ ಕಾರಣ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.
ಘಟನಾ ಸ್ಥಳಕ್ಕೆ ಶಿಕ್ಷಣಾಧಿಕಾರಿ ನಾಗೇಶ್ ನಾಯ್ಕ್, ಉಪ್ಪುಂದ ಗ್ರಾ.ಪಂ ಅಧ್ಯಕ್ಷೆ ಲಕ್ಷ್ಮೀ, ಸದಸ್ಯ ಶ್ರೀಧರ್, ಪಿಡಿಒ ಮೊಹಮ್ಮದ್ ರಜೀಮ್, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ನಾಗರಾಜ್ ಮತ್ತಿತರರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
1ರಿಂದ 5ನೇ ತರಗತಿಗಳು ಈ ಸರ್ಕಾರಿ ಶಾಲೆಯಲ್ಲಿ ನಡೆ
ಯುತ್ತಿದ್ದು, ಅಮ್ಮನವರ ತೊಪ್ಲು ಭಾಗದ 60ಕ್ಕೂ ಅಧಿಕ ವಿದ್ಯಾರ್ಥಿಗಳು ಈ ಶಾಲೆಗೆ ವ್ಯಾಸಂಗಕ್ಕೆ ಬರುತ್ತಾರೆ. ಆದರೆ ಕೆಲ ವರ್ಷಗಳಿಂದ ಮಳೆಗಾಲದ 3ತಿಂಗಳು ಸಮೀಪದ ಶಾಲೆ ಕಟ್ಟಡದಲ್ಲಿ ಪಾಠ ನಡೆಸಲಾಗುತ್ತಿದ್ದು, ನೂತನ ಶಾಲಾಕಟ್ಟಡ ನಿರ್ಮಾಣಕ್ಕೆ ಸ್ಥಳೀಯರು ಬೇಡಿಕೆಯಿಟ್ಟಿದ್ದಾರೆ.
ಕಾಮೆಂಟ್ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ