Slider

ಜಾಹೀರಾತಿಗಾಗಿ ಸಂಪರ್ಕಿಸಿ

ಫೋನ್: 86605 39735

ಉಡುಪಿ : ಸಚಿವ ಕೋಟ ಶ್ರೀನಿವಾಸ್ ಪೂಜಾರಿಯವರ ಬೆಂಗಾವಲು ವಾಹನ ಪಲ್ಟಿ: ಪೋಲಿಸರಿಗೆ ಗಾಯ 12.07.2022

 ಬ್ರಹ್ಮಾವರ: ಉಪ್ಪೂರು ಕೆ.ಜಿ.ರೋಡ್ ಸಮೀಪ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಇಂದು ಸಂಜೆ ಸಚಿವರ ಬೆಂಗಾವಲು ಪೊಲೀಸ್ ವಾಹನವೊಂದು ಪಲ್ಟಿಯಾಗಿದ್ದು, ಎಎಸ್ಸೈ ಸಹಿತ ಇಬ್ಬರು ಗಾಯಗೊಂಡಿರುವ ಬಗ್ಗೆ ವರದಿಯಾಗಿದೆ.



ಗಾಯಗೊಂಡವರನ್ನು ಡಿಎಆರ್‌ನ ಎಎಸ್ಸೈ ಗಣೇಶ್ ಆಳ್ವ ಹಾಗೂ ಚಾಲಕ ಚರಣ್ ಎಂದು ಗುರುತಿಸಲಾಗಿದೆ.




ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ಮುಖ್ಯಮಂತ್ರಿ ಕಾರ್ಯಕ್ರಮದಲ್ಲಿ ಭಾಗವಹಿಸಲು ಕೋಟದ ಮನೆಯಿಂದ ಹೊರಟಿದ್ದು, ಇವರಿಗೆ ಉಡುಪಿ ಜಿಲ್ಲೆಯ ಗಡಿ ಹೆಜಮಾಡಿಯವರೆಗೆ ಬೆಂಗಾವಲು ಆಗಿ ಉಡುಪಿ ಜಿಲ್ಲಾ ಸಶಸ್ತ್ರ ಮೀಸಲು ಪಡೆಯ ಜೀಪು ಸಚಿವರ ಕಾರಿನ ಹಿಂದೆ ಹೊರಟಿತ್ತು.



ಈ ವೇಳೆ ಬೆಂಗಾವಲು ಪೊಲೀಸ್ ವಾಹನ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿ ರಾಷ್ಟ್ರೀಯ ಹೆದ್ದಾರಿ ಮಧ್ಯೆ ಇರುವ ಡಿವೈಡರ್ ಮೇಲೆ ಬಿತ್ತೆನ್ನಲಾಗಿದೆ. ಇದರಿಂದ ಜೀಪಿನಲ್ಲಿದ್ದ ಎಎಸ್ಸೈ ಹಾಗೂ ಚಾಲಕ ಗಾಯಗೊಂಡಿದ್ದಾರೆಂದು ತಿಳಿದುಬಂದಿದೆ.





ಸ್ಥಳಕ್ಕೆ ಬ್ರಹ್ಮಾವರ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.








0

ಕಾಮೆಂಟ್‌ಗಳಿಲ್ಲ

ಕಾಮೆಂಟ್‌‌ ಪೋಸ್ಟ್‌ ಮಾಡಿ

Mega Menu

blogger
© all rights reserved
made with by templateszoo