Slider

ಜಾಹೀರಾತಿಗಾಗಿ ಸಂಪರ್ಕಿಸಿ

ಫೋನ್: 86605 39735

ವಿದ್ಯುತ್ ದರ ಹೆಚ್ಚಳ; ಜೂನ್ 22 ರಂದು ಕರ್ನಾಟಕ ಬಂದ್‌ಗೆ ಕರೆ

Karnatakabandh

 


ಬೆಂಗಳೂರು: ನೂತನ ಸರ್ಕಾರ ಆಡಳಿತಕ್ಕೆ ಬಂದ ಬೆನ್ನಲ್ಲೇ ವಿದ್ಯುತ್ ದರ ಏರಿಕೆ ಕಂಡಿರುವುದರಿಂದ, ಕೈಗಾರಿಕೆಗಳಿಗೆ ಸಂಕಷ್ಟ ಎದುರಾಗಿದೆ. ಹೀಗಾಗಿ ಇದನ್ನು ಖಂಡಿಸಿ ಕರ್ನಾಟಕ ವಾಣಿಜ್ಯ ಮಂಡಳಿ ಮತ್ತು ಕೈಗಾರಿಕಾ ಮಂಡಳಿ ಜೂನ್.22ರಂದು ಕರ್ನಾಟಕ ಬಂದ್ ಗೆ ಕರೆ ನೀಡಿದ್ದು ಇದಕ್ಕೆ ರಾಜ್ಯದ ಹಲವು ಉದ್ಯಮಿಗಳು ಹಾಗೂ ಕೈಗಾರಿಕೆಗಳು ಬೆಂಬಲ ಸೂಚಿಸಿದೆ.

ಎಫ್ ಕೆ ಸಿಸಿಐ ಎಚ್ಚರಿಕೆ ನೀಡಿದರೂ ರಾಜ್ಯ ಸರ್ಕಾರ ಯಾವುದೇ ಚರ್ಚೆ ನಡೆಸದ ಹಿನ್ನೆಲೆಯಲ್ಲಿ ಕರ್ನಾಟಕ ಚೇಂಬರ್ ಆಫ್ ಕಾಮರ್ಸ್ ಹಾಗೂ ಇಂಡಸ್ಟ್ರಿ ಬಂದ್ ನಿರ್ಧಾರ ತೆಗೆದುಕೊಂಡಿದೆ. ವಿದ್ಯುತ್ ದರ ಇಳಿಕೆ ಸಂಬಂಧ ಸರ್ಕಾರಕ್ಕೆ ಈಗಾಗಲೇ ಮನವಿ ಮಾಡಲಾಗಿತ್ತು. ಅಲ್ಲದೇ ಜೂನ್.10ರವರೆಗೆ ಗಡುವು ನೀಡಲಾಗಿತ್ತು. ಆದರೆ ಸರ್ಕಾರ ಮಾತ್ರ ಈವರೆಗೆ ಯಾವುದೇ ಸ್ಪಂದನೆ ನೀಡಿಲ್ಲ. ಹೀಗಾಗಿ ಕರ್ನಾಟಕ ಬಂದ್ ಗೆ ಕರೆ ನೀಡಿರುವುದಾಗಿ ಹೇಳಿದೆ.






0

ಕಾಮೆಂಟ್‌ಗಳಿಲ್ಲ

ಕಾಮೆಂಟ್‌‌ ಪೋಸ್ಟ್‌ ಮಾಡಿ

Mega Menu

blogger
© all rights reserved
made with by templateszoo