ದೂರುದಾರರಾದ ಸ್ನೇಹಮಯಿ ಕೃಷ್ಣ ಅವರ ಪರ ವಕೀಲ ಲಕ್ಷ್ಮೀ ಅಯ್ಯಂಗರ್ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಗೆ ಹೈಕೋರ್ಟ್ ಪ್ರತಿ ಸಮೇತ ತನಿಖೆಗೆ ಮನವಿ ಮಾಡಿದ್ದರು. ಈ ಅರ್ಜಿಯ ವಿಚಾರಣೆ ನಡೆಸಿದ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಮೂರ್ತಿ ಸಂತೋಷ್ ಗಜಾನನ ಭಟ್ ತನಿಖೆಗೆ ಅನುಮತಿ ನೀಡಿದ್ದು, ಸಿಎಂ ಸಿದ್ದರಾಮಯ್ಯ ವಿರುದ್ಧ ಎಫ್ ಐಆರ್ ದಾಖಲಾಗಲಿದೆ. ಮೈಸೂರು ಲೋಕಾಯುಕ್ತ ಪೊಲೀಸರು 3 ತಿಂಗಳೊಳಗೆ ಅಂದರೆ ಡಿಸೆಂಬರ್ 24ರೊಳಗೆ ವರದಿ ಸಲ್ಲಿಕೆಯಾಗಬೇಕು ಎಂದು ಕೋರ್ಟ್ ಆದೇಶ ನೀಡಿದೆ
ಕಾಮೆಂಟ್ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ