Slider

ಜಾಹೀರಾತಿಗಾಗಿ ಸಂಪರ್ಕಿಸಿ

ಫೋನ್: 86605 39735

ಮಣಿಪಾಲ: ತುಳು ಹಾಸ್ಯ ನಟ ಭೋಜರಾಜ್ ವಾಮಂಜೂರು ಪ್ರಯಾಣಿಸುತ್ತಿದ್ದ ಕಾರು ಅಪಘಾತ:

Udupinews

 






ಮಣಿಪಾಲ: ತುಳು ಹಾಸ್ಯ ನಟ ಭೋಜರಾಜ್ ವಾಮಂಜೂರು ಪ್ರಯಾಣಿಸುತ್ತಿದ್ದ ಕಾರು ಅಪಘಾತ: 


ಮಣಿಪಾಲ: ಈಶ್ವರ ನಗರದ ನಗರಸಭೆಯ ಪಂಪ್‌ಹೌಸ್ ಬಳಿ ರವಿವಾರ ಸಂಜೆ ವೇಳೆ ನಾಟಕ ಕಲಾವಿದರ ಕಾರೊಂದು ಅಪಘಾತಕ್ಕೀಡಾಗಿದ್ದು, ಯಾವುದೇ ಗಾಯಗಳಾಗದೇ ಎಲ್ಲರೂ ಅಪಾಯದಿಂದ ಪಾರಾಗಿರುವ ಬಗ್ಗೆ ವರದಿಯಾಗಿದೆ.

ಉಡುಪಿಯ ಹೀರೆಬೆಟ್ಟುವಿನಲ್ಲಿ ರವಿವಾರ ಸಂಜೆ ಪ್ರದರ್ಶನಗೊಳ್ಳಲಿದ್ದ 'ಏರ್ಲಾ ಗ್ಯಾರಂಟಿ ಅತ್ತು' ನಾಟಕ ಪ್ರದರ್ಶನಕ್ಕಾಗಿ ತೆಲಿಕೆದ ಬೊಳ್ಳಿ ದೇವದಾಸ್ ಕಾಪಿಕಾಡ್ ಅವರ ನಾಟಕ ತಂಡದ ಸದಸ್ಯರು ಕಾರಿನಲ್ಲಿ ಸಂಚರಿಸುತ್ತಿದ್ದು, ಇದರಲ್ಲಿ ತುಳು ನಾಟಕದ ಕಲಾವಿದ ಭೋಜರಾಜ ವಾಮಂಜೂರ್ ಕೂಡ ಇದ್ದರು.

ಈ ವೇಳೆ ನಿಯಂತ್ರಣ ತಪ್ಪಿದ ಕಾರು ಹೊಂಡಕ್ಕೆ ಬಿದ್ದು ಅಪಘಾತಕ್ಕೀಡಾಗಿದೆ ಎಂದು ತಿಳಿದುಬಂದಿದೆ. ತಂಡದ ಕಲಾವಿದರೆಲ್ಲರೂ ಯಾವುದೇ ಗಾಯಗಳಾಗದೇ ಅಪಾಯದಿಂದ ಪಾರಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ.










0

ಕಾಮೆಂಟ್‌ಗಳಿಲ್ಲ

ಕಾಮೆಂಟ್‌‌ ಪೋಸ್ಟ್‌ ಮಾಡಿ

Mega Menu

blogger
© all rights reserved
made with by templateszoo