Slider

ಜಾಹೀರಾತಿಗಾಗಿ ಸಂಪರ್ಕಿಸಿ

ಫೋನ್: 86605 39735

ಉಡುಪಿ: ಮುಂದಿನ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸುತ್ತೇನೆ: ಮಾಜಿ ಶಾಸಕ ರಘುಪತಿ ಭಟ್

 


ಉಡುಪಿ: ಮುಂದಿನ ವಿಧಾನಸಭಾ ಚುನಾವಣೆಗೆ ನಾನು ಸ್ಪರ್ಧಿಸುತ್ತೇನೆ ಎಂದು ಮಾಜಿ ಶಾಸಕ ಬಿಜೆಪಿಯ ಉಚ್ಚಾಟಿತ ನಾಯಕ ರಘುಪತಿ ಭಟ್ ಹೇಳಿದ್ದಾರೆ.

ಉಡುಪಿಯಲ್ಲಿ ಪತ್ರಿಕಾಗೋಷ್ಠಿ ವೇಳೆ ಮಾತನಾಡಿದ ಅವರು, ಇನ್ನೊಂದು ಬಾರಿ ವಿಧಾನಸಭೆಗೆ ಸ್ಪರ್ಧಿಸಬೇಕು ಎಂದು ನಿರ್ಧರಿಸಿದ್ದೇನೆ.

ಜನತೆ ನನ್ನನ್ನು ಈವರೆಗೆ ಸೋಲಿಸಿಲ್ಲ. ಉಡುಪಿ ವಿಧಾನಸಭಾ ಕ್ಷೇತ್ರದಿಂದ ನಾನು ಮೂರು ಬಾರಿಗೆ ಗೆದ್ದಿದ್ದೇನೆ. ಇನ್ನೂ ಮೂರುವರೆ ವರ್ಷ ಇದೆ. ಯಾವ ಪಕ್ಷದಿಂದ ಸ್ಪರ್ಧಿಸಬೇಕು ಎಂದು ಮುಂದೆ ನಿರ್ಧರಿಸುತ್ತೇನೆಂದು ಹೇಳಿದರು.

ಬಿಜೆಪಿ ಸೇರ್ಪಡೆ ಬಗ್ಗೆ ಉತ್ತರಿಸಿದ ಅವರು, ಪಕ್ಷ ಕರೆದರೆ ನಾನು ಬಿಜೆಪಿಗೆ ಸೇರುತ್ತೇನೆ. ಸದ್ಯದ ಬೆಳವಣಿಗೆಗಳನ್ನು ನೋಡುತ್ತಿರುವಾಗ ಬಿಜೆಪಿಗೆ ನನ್ನ ಅವಶ್ಯಕತೆ ಇಲ್ಲ ಅಂತ ಅನ್ನಿಸಿರಬೇಕು. ಹಾಗಾಗಿ ಬಿಜೆಪಿ ನನ್ನನ್ನು ಆಹ್ವಾನಿಸುತ್ತಿಲ್ಲ ಎಂದು ಹೇಳಿದ್ದಾರೆ.

ಕಾಂಗ್ರೆಸ್ ಸೇರ್ಪಡೆ ಮತ್ತು ಇತರ ಯಾವುದೇ ಚರ್ಚೆ ನಡೆದಿಲ್ಲ. ಕಾಂಗ್ರೆಸ್‌ನ ಯಾರೂ ನನ್ನನ್ನು ಭೇಟಿ ಆಗಿಲ್ಲ. ನಾನೂ ಯಾರನ್ನೂ ಭೇಟಿ ಆಗಿಲ್ಲ. ಬಿಜೆಪಿಯ ಪ್ರಾಥಮಿಕ ಸದಸ್ಯತ್ವಕ್ಕೆ ಮಿಸ್ ಕಾಲ್ ಕೊಟ್ಟಿದ್ದೇನೆ. ಸ್ಥಾನೀಯ ಸಮಿತಿ, ನಗರ ಸಮಿತಿ ಅಪ್ರೋವ್ ಮಾಡುತ್ತದೋ ಇಲ್ಲವೋ ಗೊತ್ತಿಲ್ಲ ಎಂದರು.




0

ಕಾಮೆಂಟ್‌ಗಳಿಲ್ಲ

ಕಾಮೆಂಟ್‌‌ ಪೋಸ್ಟ್‌ ಮಾಡಿ

Mega Menu

blogger
© all rights reserved
made with by templateszoo