Slider

ಜಾಹೀರಾತಿಗಾಗಿ ಸಂಪರ್ಕಿಸಿ

ಫೋನ್: 86605 39735

ಉದ್ಯಾವರ: ಎಟಿಎಂ ಕಳವಿಗೆ ಯತ್ನ : ಸೈರನ್ ಸದ್ದು ಕೇಳಿ ಪರಾರಿಯಾದ ಮುಸುಕುಧಾರಿಗಳು...!!


 ಕಾಪು : ಉದ್ಯಾವರ ಕೆನರಾ ಬ್ಯಾಂಕ್‌ನ ಎಟಿಎಂನಲ್ಲಿ ಮುಸುಕುಧಾರಿಯೊರ್ವನು ಕಳವಿಗೆ ವಿಫಲ ಯತ್ನ ನಡೆಸಿದ ಘಟನೆ ಕಾಪು ಠಾಣೆ ವ್ಯಾಪ್ತಿಯಲ್ಲಿ ಇಂದು ನಸುಕಿನ ಜಾವ ನಡೆದಿದೆ.

ಉದ್ಯಾವರದಲ್ಲಿನ ಕೆನರಾ ಬ್ಯಾಂಕ್ ಎಟಿಎಂ ಶಾಖೆಗೆ ಬುಧವಾರ ಬೆಳಗ್ಗಿನ ಜಾವ ಎರಡು ಗಂಟೆಗೆ ಮೂರು ಮಂದಿ ದುಷ್ಕರ್ಮಿಗಳು ಮುಸುಕು ಹಾಕಿಕೊಂಡು ಬಂದಿದ್ದು ಎಟಿಎಂ ಬಾಕ್ಸ್ ಒಡೆಯಲು ಯತ್ನಿಸಿದ್ದಾರೆ. ಈ ವೇಳೆ ಎಟಿಎಂ ನಿಂದ ಸೈರನ್ ಹೊಡೆದುಕೊಂಡಿದ್ದು ಕಳ್ಳರು ಸ್ಥಳದಿಂದ ಓಡಿಹೋಗಿದ್ದಾರೆ.

ಸೈರನ್ ಹೊಡೆದುಕೊಂಡ ಸಂದೇಶ ಕೆನರಾ ಬ್ಯಾಂಕಿನ ಸೆಕ್ಯೂರಿಟಿ ವಿಭಾಗಕ್ಕೆ ರವಾನೆಯಾಗಿದ್ದು ಬಾಂಕ್ ಸಿಬಂದಿ ಕೂಡಲೇ ಕಾಪು ಪೋಲಿಸರಿಗೆ ಮಾಹಿತಿ ರವಾನಿಸಿದ್ದಾರೆ. ಅಲ್ಲದೆ ಬ್ಯಾಂಕ್ ಸಿಬಂದಿ ಕೂಡ ತಮ್ಮ ಬ್ಯಾಂಕಿನ ಸೆಕ್ಯೂರಿಟಿ ಅಧಿಕಾರಿಗಳನ್ನು ಎಟಿಎಂ ಸ್ಥಳಕ್ಕೆ ಕಳುಹಿಸಿದ್ದಾರೆ.

ಸ್ಥಳಕ್ಕೆ ಬೆರಳಚ್ಚು ತಜ್ಞರು, ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಭೇಟಿಕೊಟ್ಟು ಪರಿಶೀಲನೆ ಮಾಡುತ್ತಿದ್ದಾರೆ. ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

0

ಕಾಮೆಂಟ್‌ಗಳಿಲ್ಲ

ಕಾಮೆಂಟ್‌‌ ಪೋಸ್ಟ್‌ ಮಾಡಿ

Mega Menu

blogger
© all rights reserved
made with by templateszoo