Slider

ಜಾಹೀರಾತಿಗಾಗಿ ಸಂಪರ್ಕಿಸಿ

ಫೋನ್: 86605 39735

ಅಮಾಸೆಬೈಲು : ಅಕ್ರಮ ಮರಳು ಸಾಗಾಟ: ವಾಹನ ಚಾಲಕನ ಬಂಧನ

 


ಕುಂದಾಪುರ, ಫೆಬ್ರವರಿ 5: ಕುಂದಾಪುರ ತಾಲೂಕಿನ ಮಚ್ಚಟ್ಟು ಗ್ರಾಮದ ಕಳಿನಜೆಡ್ಡು ಎಂಬಲ್ಲಿ ಅಕ್ರಮವಾಗಿ ಮರಳು ಸಾಗಾಟ ಮಾಡುತ್ತಿದ್ದ ವಾಹನವೊಂದನ್ನು ಅಮಾಸೆಬೈಲು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಈ ಸಂಬಂಧ ವಾಹನ ಚಾಲಕನನ್ನು ಬಂಧಿಸಲಾಗಿದೆ.

ಅಮಾಸೆಬೈಲು ಪೊಲೀಸ್ ಠಾಣೆಯ ಉಪನಿರೀಕ್ಷಕ ಅಶೋಕ್ ಕುಮಾರ್ ಅವರು ಸಿಬ್ಬಂದಿಯವರೊಂದಿಗೆ ರೌಂಡ್ಸ್ ಕರ್ತವ್ಯದಲ್ಲಿದ್ದಾಗ, ಖಚಿತ ಮಾಹಿತಿ ಮೇರೆಗೆ ಮಚ್ಚಟ್ಟು ಗ್ರಾಮದ ಕಳಿನಜೆಡ್ಡು ಬಳಿ ವಾಹನ ತಪಾಸಣೆ ನಡೆಸುತ್ತಿದ್ದರು. ಸಂಜೆ ಸುಮಾರು 5 ಗಂಟೆ ಸಮಯದಲ್ಲಿ ಸಿದ್ದಾಪುರ ಕಡೆಯಿಂದ ಅಮಾಸೆಬೈಲು ಕಡೆಗೆ ಬರುತ್ತಿದ್ದ ಕೆಎ 20 ಎಬಿ 0740 ನಂಬರ್‌ನ 407 ವಾಹನವನ್ನು ತಡೆದು ಪರಿಶೀಲಿಸಲಾಯಿತು. ವಾಹನದಲ್ಲಿ ಸುಮಾರು 1 ಯೂನಿಟ್ ಮರಳು ಇರುವುದು ಕಂಡುಬಂದಿತು.

ವಾಹನ ಚಾಲಕನನ್ನು ವಿಚಾರಿಸಿದಾಗ, ಆತ ಪ್ರಶಾಂತ ಶಂಕರನಾರಾಯಣ ಗ್ರಾಮ ಎಂದು ತಿಳಿಸಿದನು. ಪ್ರಶಾಂತನು ಅಕ್ರಮ ಲಾಭ ಗಳಿಸುವ ಉದ್ದೇಶದಿಂದ ಮತ್ತು ಸಂಘಟಿತ ಅಪರಾಧ ಮಾಡುವ ಉದ್ದೇಶದಿಂದ ಮರಳನ್ನು ಕಳವು ಮಾಡಿ, ಸರ್ಕಾರಕ್ಕೆ ಯಾವುದೇ ರಾಜಧನವನ್ನು ಪಾವತಿಸದೆ ಮತ್ತು ಸಂಬಂಧಪಟ್ಟ ಇಲಾಖೆಯಿಂದ ಯಾವುದೇ ಪರವಾನಿಗೆ ಪಡೆಯದೆ ಅಕ್ರಮವಾಗಿ ಮರಳನ್ನು ಸಾಗಾಟ ಮಾಡುತ್ತಿದ್ದನು.

ಈ ಬಗ್ಗೆ ಅಮಾಸೆಬೈಲು ಪೊಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 04-2025 ಕಲಂ 303(2), 112 BNS-2023 ಮತ್ತು ಕಲಂ:4(1-A), 21(4), MMRD Act ರಂತೆ ಪ್ರಕರಣ ದಾಖಲಿಸಲಾಗಿದೆ.

0

ಕಾಮೆಂಟ್‌ಗಳಿಲ್ಲ

ಕಾಮೆಂಟ್‌‌ ಪೋಸ್ಟ್‌ ಮಾಡಿ

Mega Menu

blogger
© all rights reserved
made with by templateszoo