Slider

ಜಾಹೀರಾತಿಗಾಗಿ ಸಂಪರ್ಕಿಸಿ

ಫೋನ್: 86605 39735

ಕುಂಭಮೇಳಕ್ಕೆ ಉಡುಪಿಯಿಂದ ವಿಶೇಷ ರೈಲು: ರೈಲ್ವೆ ಇಲಾಖೆಯ ಅಧಿಕೃತ ಪ್ರಕಟಣೆ

 


ಉಡುಪಿ: ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳಕ್ಕೆ ಉಡುಪಿಯಿಂದ ವಿಶೇಷ ರೈಲು ಸೇವೆ ಆರಂಭಿಸಲಾಗಿದೆ. ಈ ಕುರಿತು ರೈಲ್ವೆ ಇಲಾಖೆ ಅಧಿಕೃತ ಪ್ರಕಟಣೆ ಹೊರಡಿಸಿದೆ.

ದಿನಾಂಕ ಫೆಬ್ರವರಿ 17 ರಂದು ಮಧ್ಯಾಹ್ನ 12.30ಕ್ಕೆ ಉಡುಪಿಯಿಂದ ರೈಲು ಹೊರಡಲಿದ್ದು, ಕುಂಭಮೇಳಕ್ಕೆ ತೆರಳುವ ಯಾತ್ರಾರ್ಥಿಗಳಿಗೆ ಅನುಕೂಲವಾಗಲಿದೆ. ಈ ವಿಶೇಷ ರೈಲು ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಯ ಪ್ರಯಾಣಿಕರಿಗೆ ವರದಾನವಾಗಿದ್ದು, ಕಡಿಮೆ ಖರ್ಚಿನಲ್ಲಿ ಕುಂಭಮೇಳಕ್ಕೆ ತೆರಳಲು ಸಾಧ್ಯವಾಗುತ್ತದೆ.

ಈ ರೈಲು ಸೇವೆಯನ್ನು ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಬಳಸಿಕೊಳ್ಳುವಂತೆ ಕೋರಲಾಗಿದೆ. ಟಿಕೆಟ್‌ಗಳು ಫೆಬ್ರವರಿ 14 ರಿಂದ ಲಭ್ಯವಿದ್ದು, ರೈಲ್ವೆ ಇಲಾಖೆಯ ವೆಬ್‌ಸೈಟ್ ಅಥವಾ ರೈಲು ನಿಲ್ದಾಣಗಳ ಟಿಕೆಟ್ ಕೌಂಟರ್‌ನಲ್ಲಿ ಪಡೆದುಕೊಳ್ಳಬಹುದು.

ಈ ವಿಶೇಷ ರೈಲು 17ನೇ ತಾರೀಖು ಮಧ್ಯಾಹ್ನ 12.30ಗೆ ಉಡುಪಿಯಿಂದ ಹೊರಟ ರೈಲು 19ನೇ ತಾರೀಖಿನಂದು ಬೆಳಿಗ್ಗೆ 6.30ಗಂಟೆಗೆ ಪ್ರಯಾಗ್ ರಾಜ್ ತಲುಪಲಿದೆ. ಹಾಗೂ ಮಾರನೇ ದಿನ 20ನೇ ತಾರೀಖಿನಂದು ಸಂಜೆ 6.30ಗಂಟೆಗೆ ಪ್ರಯಾಗ್ ರಾಜ್ ನಿಂದ ಹೊರಟು 22ರಂದು ಉಡುಪಿ ತಲುಪಲಿದೆ.



0

ಕಾಮೆಂಟ್‌ಗಳಿಲ್ಲ

ಕಾಮೆಂಟ್‌‌ ಪೋಸ್ಟ್‌ ಮಾಡಿ

Mega Menu

blogger
© all rights reserved
made with by templateszoo