Slider

ಜಾಹೀರಾತಿಗಾಗಿ ಸಂಪರ್ಕಿಸಿ

ಫೋನ್: 86605 39735

ಮಂಗಳೂರು: ಕೋಮು ದ್ವೇಷ ಭಾಷಣ ಆರೋಪ ಚಕ್ರವರ್ತಿ ಸೂಲಿಬೆಲೆ ವಿರುದ್ಧ ಎಫ್ಐಆರ್ ದಾಖಲು


ಮಂಗಳೂರು : ಚಿಂತಕ, ಯುವ ಬ್ರಿಗೇಡ್ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ಅವರ ವಿರುದ್ಧ ಕಾಂಗ್ರೆಸ್ ನಾಯಕರೊಬ್ಬರು ನೀಡಿದ ದೂರಿನ ಮೇರೆಗೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅವರು ಮಾಡಿದ ಭಾಷಣಕ್ಕೆ ಸಂಬಂಧಿಸಿದಂತೆ ಆರೋಪಿಸಿ ದೂರು ನೀಡಲಾಗಿದೆ.

ಅದರನ್ವಯ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಪೊಲೀಸ್ ಮೂಲಗಳು ಮಾಹಿತಿ ನೀಡಿವೆ. ಈ ಬಗ್ಗೆ ಸ್ವತಃ ವಾಗ್ಮಿ ಚಕ್ರವರ್ತಿ ಸೂಲಿಬೆಲೆಯವರು ದೂರಿನ ಪ್ರತಿ ಹಂಚಿಕೊಂಡಿದ್ದಾರೆ.

ಭಾಷಣದ ವೇಳೆ ಚಕ್ರವರ್ತಿ ಸೂಲಿಬೆಲೆ ಅವರು ಕೋಮು ದ್ವೇಷದ ಭಾಷಣ ಮಾಡಿದ್ದಾರೆ ಎಂದು ಇಲ್ಲಿನ ಕಾಂಗ್ರೆಸ್ ಅಧ್ಯಕ್ಷ ಮುಸ್ತಫಾ ಅಬ್ದುಲ್ ಅವರು ಆರೋಪಿಸಿದ್ದಾರೆ. ಅವರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಉಳ್ಳಾಲ ಪೊಲೀಸ್‌ ಠಾಣೆಯಲ್ಲಿ ದೂರು ಕೊಟ್ಟಿದ್ದಾರೆ. ದೂರಿನಡಿ ಸೂಲಿಬೆಲೆಯವರ ವಿರುದ್ಧ ಪ್ರಕರಣ ದಾಖಲಾಗಿದೆ.

ದಕ್ಷಿಣ ಕನ್ನಡ ಜಿಲ್ಲೆಯ ಕುತ್ತಾರಿನಲ್ಲಿ ಇತ್ತೀಚೆಗೆ ಕೊರಗಜ್ಜನ ಆದಿ ಕ್ಷೇತ್ರಕ್ಕೆ ನಮ್ಮ ನಡೆ ಪಾದಯಾತ್ರೆ ಸಮಾರೋಪ ನಡೆಯಿತು. ಈ ವೇಳೆ ಅಲ್ಲಿ ಅತಿಥಿಯಾಗಿ ತೆರಳಿದ್ದ ಚಕ್ರವರ್ತಿ ಸೂಲಿಬೆಲೆ ಅವರು ಜನರನ್ನು ಉದ್ದೇಶಿಸಿ ಭಾಷಣ ಮಾಡಿದ್ದರು. ಈ ವೇಳೆ ಅವರು ಕೋಮು ಧ್ವೇಷದ ಭಾಷಣ ಮಾಡಿದ್ದಾರೆ ಎಂದು ಆರೋಪಿಸಿ ದೂರು ನೀಡಲಾಗಿದೆ.

FIR ಕುರಿತು ಚಕ್ರವರ್ತಿ ಸೂಲಿಬೆಲೆ ಹೇಳಿದ್ದೇನು?

ಉಳ್ಳಾಲ ಠಾಣೆಯಲ್ಲಿ ದಾಖಲಾಗಿರುವ ಎಫ್‌ಐಆರ್‌ ಬಗ್ಗೆ ಸ್ವತಃ ಚಿಂತಕ, ಯುವ ಬ್ರಿಗೇಡ್ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆಯವರು ಮಾಹಿತಿ ಹಂಚಿಕೊಂಡಿದ್ದಾರೆ. ಅವರು ಎಕ್ಸ್‌ ಪೋಸ್ಟ್‌ನಲ್ಲಿ 'ನನ್ನ ವಿರುದ್ಧ ಮತ್ತೊಂದು ಎಫ್‌ಐಆರ್ ದಾಖಲಾಗಿದೆ. ಈ ಬಾರಿ ದ್ವೇಷ ಭಾಷಣಕ್ಕಾಗಿ ಅಲ್ಲ. ಬದಲಿಗೆ ಪ್ರೀತಿಯನ್ನು ಪ್ರತಿಪಾದಿಸಿದ್ದಕ್ಕಾಗಿ. ಪ್ರೀತಿಗೆ ಯಾವುದೇ ಮಿತಿಯಿಲ್ಲ ಎಂದು ನಾನು ಹೇಳಿದ್ದೇನೆ. ಮತ್ತು ಹಿಂದೂ ಹುಡುಗರು ಸಮುದಾಯಗಳನ್ನು ಮೀರಿ ಮದುವೆಯಾಗಲು ಸಾಮಾಜಿಕ ನಿರ್ಬಂಧಗಳಿಂದ ಮುಕ್ತರಾಗಬೇಕು ಎಂದಿದ್ದೇನೆ. ಇದನ್ನು ದ್ವೇಷ ಎಂದು ಹೇಗೆ ಪರಿಗಣಿಸಬಹುದು?'' ಎಂದು ಅವರು ತಮ್ಮ ಮೇಲಿನ ಆರೋಪ ತಳ್ಳಿ ಹಾಕಿದ್ದಾರೆ. 


0

ಕಾಮೆಂಟ್‌ಗಳಿಲ್ಲ

ಕಾಮೆಂಟ್‌‌ ಪೋಸ್ಟ್‌ ಮಾಡಿ

Mega Menu

blogger
© all rights reserved
made with by templateszoo