ಮಂಗಳೂರು, ಮಾರ್ಚ್ 15: ಹಿರಿಯ ವಿದ್ವಾಂಸ ಹಾಗೂ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಮಾಜಿ ಅಧ್ಯಕ್ಷ ಡಾ.ವಾಮನ ನಂದಾವರ ಅವರು ಶನಿವಾರ (ಮಾರ್ಚ್ 15, 2025) ಬೆಳಗ್ಗೆ ಮಂಗಳೂರಿನಲ್ಲಿ ನಿಧನರಾದರು. ಅವರಿಗೆ 81 ವರ್ಷ ವಯಸ್ಸಾಗಿತ್ತು. ಕಳೆದ ಕೆಲ ವರ್ಷಗಳಿಂದ ಅವರು ಅನಾರೋಗ್ಯದಿಂದ ಬಳಲುತ್ತಿದ್ದರು.
ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ನಂದಾವರ ಮೂಲದವರಾದ ಡಾ.ವಾಮನ ನಂದಾವರ ಅವರು ಕನ್ನಡ ಮತ್ತು ತುಳು ಭಾಷಾ ವಿದ್ವಾಂಸರಾಗಿ ಹೆಸರುವಾಸಿಯಾಗಿದ್ದರು. ತುಳು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾಗಿ ಅವರು ತುಳು ಭಾಷೆಯ ಅಧ್ಯಯನಕ್ಕೆ ಮಹತ್ವದ ಕೊಡುಗೆಗಳನ್ನು ನೀಡಿದ್ದಾರೆ. ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ವಿಚಾರ ಸಂಕಿರಣಗಳಲ್ಲಿ ಜಾನಪದ ಸಿದ್ಧಾಂತದ ಅಧ್ಯಯನ, ಕಾರ್ಯಾಗಾರಗಳ ಆಯೋಜನೆ ಮತ್ತು ಭಾಗವಹಿಸುವಿಕೆಯಲ್ಲಿ ಅವರು ಸಕ್ರಿಯವಾಗಿ ತೊಡಗಿಸಿಕೊಂಡಿದ್ದರು.
ತುಳು ಪಠ್ಯಪುಸ್ತಕ ಸಮಿತಿ, ತುಳು ನಿಘಂಟು ಯೋಜನೆ ಮತ್ತು ತುಳು ಜಾನಪದ ಪತ್ರಿಕೆ ಮಂಡಳಿಯಲ್ಲಿಯೂ ಅವರು ಸೇವೆ ಸಲ್ಲಿಸಿದ್ದಾರೆ. ಬಂಟ್ವಾಳ ತಾಲೂಕಿನ 12ನೇ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಅವರು ಕಾರ್ಯನಿರ್ವಹಿಸಿದ್ದರು.
ಡಾ.ವಾಮನ ನಂದಾವರ ಅವರ ನಿಧನಕ್ಕೆ ಕನ್ನಡ ಮತ್ತು ತುಳು ಸಾಹಿತ್ಯ ಲೋಕದ ಗಣ್ಯರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ಡಾ.ವಾಮನ ನಂದಾವರ ಅವರ ಪ್ರಮುಖ ಕೊಡುಗೆಗಳು:
* ತುಳು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾಗಿ ತುಳು ಭಾಷೆಯ ಅಧ್ಯಯನಕ್ಕೆ ಮಹತ್ವದ ಕೊಡುಗೆ.
* ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ವಿಚಾರ ಸಂಕಿರಣಗಳಲ್ಲಿ ಜಾನಪದ ಸಿದ್ಧಾಂತದ ಅಧ್ಯಯನ.
* ತುಳು ಪಠ್ಯಪುಸ್ತಕ ಸಮಿತಿ, ತುಳು ನಿಘಂಟು ಯೋಜನೆ ಮತ್ತು ತುಳು ಜಾನಪದ ಪತ್ರಿಕೆ ಮಂಡಳಿಯಲ್ಲಿ ಸೇವೆ.
* ಬಂಟ್ವಾಳ ತಾಲೂಕಿನ 12ನೇ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷತೆ.
* ಅನೇಕ ತುಳು ಹಾಗು ಕನ್ನಡ ಸಾಹಿತ್ಯ ಕೃತಿಗಳ ರಚನೆ.
ಅಂತಿಮ ದರ್ಶನ:
* ಮಧ್ಯಾಹ್ನ 1 ಗಂಟೆ ತನಕ ಉಳಾಯಿಬೆಟ್ಟು ಅವತಾರ್ ವಿಶ್ರಾಂತಿ ಮನೆಯಲ್ಲಿ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ಅವಕಾಶ.
* ಮಧ್ಯಾಹ್ನ 2 ಗಂಟೆಗೆ ಉರ್ವಸ್ಟೋರ್ ನಲ್ಲಿರುವ ತುಳು ಸಾಹಿತ್ಯ ಅಕಾಡೆಮಿಯ ತುಳು ಭವನದಲ್ಲಿ ಸಾರ್ವಜನಿಕ ದರ್ಶ
ನಕ್ಕೆ ಅವಕಾಶ.
ಕಾಮೆಂಟ್ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ