Slider

ಜಾಹೀರಾತಿಗಾಗಿ ಸಂಪರ್ಕಿಸಿ

ಫೋನ್: 86605 39735

ಮಲ್ಪೆಯ ಮೀನುಗಾರರ ಸಮಸ್ಯೆಯನ್ನು ಸಾಮರಸ್ಯ ದಿಂದ ಬಗೆಹರಿಸಿ : ಸಿಎಂಗೆ ಸಂಸದ ಕೋಟ ಶ್ರೀನಿವಾಸ್ ಪೂಜಾರಿ ಮನವಿ

 


ಮಲ್ಪೆಯ ಮೀನುಗಾರರ ಸಮಸ್ಯೆಯನ್ನು ಸಾಮರಸ್ಯ ದಿಂದ ಬಗೆಹರಿಸಿ ಎಲ್ಲಾ ಸಮುದಾಯದವರೂ ನೆಮ್ಮದಿಯ ಬದುಕು ರೂಪಿಸಿಕೊಳ್ಳಲು ಅವಕಾಶ ಮಾಡಿಕೊಡಬೇಕು ಎಂದು ಸಂಸದ ಕೋಟ ಶ್ರೀನಿವಾಸ ಪೂಜಾರಿ, ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಮನವಿ ಮಾಡಿದ್ದಾರೆ.

ಹಲವಾರು ವರ್ಷಗಳಿಂದ ಒಟ್ಟಾಗಿ ಬದುಕುತ್ತಿದ್ದ ಮಲ್ಪೆಯ ಮೀನುಗಾರರು ಮತ್ತು ರಾಜ್ಯದ ಇತರ ಭಾಗದ ದಿನ ಕೆಲಸಗಾರ ಮಧ್ಯೆ ನೋವಿನ ಘಟನೆ ಯೊಂದು ನಡೆದು ಹೋಗಿದೆ.

ಪ್ರಕರಣದ ಬಗ್ಗೆ ನೋವು ವ್ಯಕ್ತ ಪಡಿಸಿ, ಘಟನೆಯನ್ನು ಒಟ್ಟಾಗಿ ಚರ್ಚಿಸಿ ಪರಿಹಾರ ಮಾಡಿಕೊಂಡಿದ್ದಾರೆ. ಮುಂದೆಂದೂ ಇಂತಹ ಘಟನೆ ಮರುಕಳಿಸದಂತೆ ಎಚ್ಚರ ವಹಿಸುವ ಭಾವನೆ ವ್ಯಕ್ತಪಡಿಸಿದ್ದಾರೆ. 

ಇಂತಹ ಸಮಯದಲ್ಲಿ ಒಂದು ಅಹಿತಕರ ಘಟನೆಯನ್ನು ಇತ್ತಂಡಗಳು ಮರೆತು ನೆಮ್ಮದಿಯ ಬದುಕು ಕಟ್ಟಿಕೊಳ್ಳಲು ಮುಂದಾದಾಗ ವಿನಾಃಕಾರಣ ಕಾನೂನಿನ ಹೆಸರಿನಲ್ಲಿ ಮೀನುಗಾರ ಸಮುದಾಯಕ್ಕೆ ಆತಂಕದ ಪರಿಸ್ಥಿತಿ ಉಂಟು ಮಾಡುವ ಬದಲು, ಈಗಾಗಲೇ ಬಂಧಿತ ಮಹಿಳೆಯರ ಮೇಲಿರುವ ಪ್ರಕರಣ ಹಿಂಪಡೆದು, ಮಲ್ಪೆಯಲ್ಲಿ ಶಾಂತಿ ನೆಲೆಸುವಂತಾಗಲು ಉಡುಪಿ ಜಿಲ್ಲಾಧಿಕಾರಿಗಳು ಮತ್ತು ಎಸ್ಪಿಗೆ ಆದೇಶಿಸಬೇಕೆಂದು ಸಂಸದ ಕೋಟ ಆಗ್ರಹಿಸಿದ್ದಾರೆ.



0

ಕಾಮೆಂಟ್‌ಗಳಿಲ್ಲ

ಕಾಮೆಂಟ್‌‌ ಪೋಸ್ಟ್‌ ಮಾಡಿ

Mega Menu

blogger
© all rights reserved
made with by templateszoo