ಹನಿಟ್ರ್ಯಾಪ್ ಪ್ರಕರಣ ಕುರಿತಂತೆ ಗದ್ದಲ ಎಬ್ಬಿಸಿ, ಸದನದಲ್ಲಿ ಅಲ್ಲೋಲಕಲ್ಲೋಲ ಸೃಷ್ಟಿಸಿದ್ದ ಬಿಜೆಪಿಯ 18 ಮಂದಿ ಶಾಸಕರನ್ನು ಸಭಾಧ್ಯಕ್ಷ ಯು.ಟಿ.ಖಾದರ್ ಆರು ತಿಂಗಳವರೆಗೂ ಅಮಾನತುಗೊಳಿಸಿದ್ದಾರೆ.
ವಿಧಾನಸಭೆಯ ಕಲಾಪದ ವೇಳೆ ಸ್ಪೀಕರ್ ಯುಟಿ ಖಾದರ್ ಅವರ ಪೀಠದ ಎದುರು ಬಜೆಟ್ನ ಪ್ರತಿ ಹರಿದು ಹಾಕುವ ಮೂಲಕ ಸದನದ ಕಲಾಪಕ್ಕೆ ಅಡ್ಡಿ ಮಾಡಿದ್ದು ಹಾಗೂ ಬೇಜವಾಬ್ದಾರಿಯಿಂದ ನಡೆದುಕೊಂಡ ಆರೋಪದಡಿ ಬಿಜೆಪಿಯ 18 ಶಾಸಕರನ್ನು ಅಮಾನತು ಮಾಡಿ ಸ್ಪೀಕರ್ ಖಾದರ್ ಅವರು ಆದೇಶಿಸಿದ್ದಾರೆ.
ತಕ್ಷಣದಿಂದಲೇ ಜಾರಿಗೆ ಬರುವಂತೆ ಅಮಾನತು ಮಾಡಿ ಘೋಷಿಸಿದರು. ಪೀಠಕ್ಕೆ ಅಶಿಸ್ತನ್ನು ತೋರಿದವರನ್ನು ಅಮಾನತು ಮಾಡಲಾಗಿದೆ. ನನಗೆ ಅವಮಾನ ಮಾಡಿದರೆ ಸಹಿಸುವೆ. ಆದರೆ ಪೀಠಕ್ಕೆ ಅಗೌರವ ತೋರಿದ್ದನ್ನು ಸಹಿಸಲ್ಲ ಎಂದು ಖಾದರ್ ಅವರು ಪ್ರತಿಪಾದಿಸಿದರು.
ಸದನದ ನಡಾವಳಿ ವಿರುದ್ಧ ನಡೆದುಕೊಂಡವರನ್ನು ಅಮಾನತು ಮಾಡಬೇಕು ಎಂದು ಕಾನೂನು ಸಚಿವ ಹೆಚ್.ಕೆ.ಪಾಟೀಲ್ ಹಾಗೂ ಆಡಳಿತರೂಢ ಸಚಿವರು ಮನವಿ ಮಾಡಿದ್ದರು. ಹನಿಟ್ರ್ಯಾಪ್ ವಿಚಾರವಾಗಿ ಪ್ರತಿಭಟಿಸಿದ ಪ್ರತಿಪಕ್ಷದ ನಾಯಕರು, ಪ್ರಕರಣವನ್ನು ಸಿಬಿಐಗೆ ವಹಿಸಬೇಕು ಎಂದೂ ಒತ್ತಾಯಿಸಿ ಸದನದ ಬಾವಿಗೆ ಇಳಿದು ಹೋರಾಟ ಮಾಡಿದ್ದರು.
ದೊಡ್ಡನಗೌಡ ಪಾಟೀಲ್ ಸೇರಿಂದತೆ ಮುನಿರತ್ನ ನಾಯ್ಡು, ಅಶ್ವಥ್ ನಾರಾಯಣ, ಎಸ್,ಆರ್,ವಿಶ್ವನಾಥ್, ಭರತ್ ಶೆಟ್ಟಿ, ಶರಣು ಸಲಗಾರ್, ಸಿ.ಕೆ.ರಾಮಮೂರ್ತಿ, ಧೀರಜ್ ಮುನಿರಾಜು, ಯಶ್ ಪಾಲ್ ಸುವರ್ಣಾ, ಉಮಾನಾಥ ಕೊಟ್ಯಾನ್, ಬಿ.ಪಿ ಹರೀಶ್, ಬಿ.ಸುರೇಶ್ ಗೌಡ, ಚನ್ನಬಸವ, ಬಸವರಾಜ ಮತ್ತಿಮಡು, ಭೈರತಿ ಬಸವರಾಜ, ಎಂ.ಆರ್.ಪಾಟೀಲ್, ಚಂದ್ರು ಲಮಾಣಿ, ಬಿ.ಸುರೇಶ್ಗೌಡ ಇನ್ನಿತರರನ್ನು ಸಸ್ಪೆಂಡ್ ಮಾಡಲಾಗಿದೆ.
ಕಾಮೆಂಟ್ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ