Slider

ಜಾಹೀರಾತಿಗಾಗಿ ಸಂಪರ್ಕಿಸಿ

ಫೋನ್: 86605 39735

ಮಲ್ಪೆಯಲ್ಲಿ ನವಜಾತ ಶಿಶು ಶವಪತ್ತೆ ಪ್ರಕರಣ : ಸುಳ್ಳು ಸುದ್ದಿ ಹಬ್ಬಿಸಿದವರ ವಿರುದ್ಧ ಕ್ರಮ : ಎಸ್ಪಿ ಡಾ.ಅರುಣ್ ಕುಮಾರ್ ..!!

 


ಉಡುಪಿ: ಮಲ್ಪೆಯ ಮಸೀದಿ ಆವರಣದ ಶೌಚಾಲಯದಲ್ಲಿ ನವಜಾತ ಶಿಶು ಶವಪತ್ತೆ ವಿಚಾರವಾಗಿ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಅರುಣ್ ಕುಮಾರ್ ಹೇಳಿಕೆ ನೀಡಿದ್ದಾರೆ. 

ಮಲ್ಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನವಜಾತ ಶಿಶು ಶವ ಪತ್ತೆ ಪ್ರಕರಣ ದಾಖಲಾಗಿದೆ. ಮಗುವಿನ ಮೃತದೇಹ ಜಾಮಿಯಾ ಮಸೀದಿ ಆವರಣದ ಶೌಚಾಲಯದಲ್ಲಿ ಪತ್ತೆಯಾಗಿದೆ ಎಂದರು.

ಕಾರ್ಮಿಕರಿಗೋಸ್ಕರ ನಿರ್ಮಿಸಿದ್ದ ಶೌಚಾಲಯದಲ್ಲಿ ಮಗುವಿನ ಶವ ಪತ್ತೆಯಾಗಿತ್ತು. ಇದು ಮಸೀದಿಯವರ ಗಮನಕ್ಕೆ ಬಂದಾಗ ದೂರು ನೀಡಿದ್ದಾರೆ. 

ಈ ಮಗುವಿನ ಶವ ಎಲ್ಲಿಂದ ಬಂತು ಎಂದು ತನಿಖೆ ನಡೆಸಲಾಗಿದೆ. ಸ್ಥಳೀಯ ಯುವತಿ ಆಫ್ರಿನಾ ಅವರ ನವಜಾತ ಮಗುವಿನ ಶವ ಎಂದು ಗೊತ್ತಾಗಿದೆ. ಆಫ್ರಿನಾಳಿಂದ ಸ್ವ ಇಚ್ಚಾ ಹೇಳಿಕೆ ಪಡೆಯಲಾಗಿದೆ ಎಂದರು.

ಆಕೆ ತನ್ನದೇ ಮಗು ಎಂದು ಒಪ್ಪಿಕೊಂಡಿದ್ದಾಳೆ. ಏಳುವರೆ ಯಿಂದ ಎಂಟು ತಿಂಗಳು ನಡುವಯಸ್ಸಿನ ಭ್ರೂಣ, ಯಾವುದೇ ಪ್ರೊಸೀಜರ್ ಇಲ್ಲದೆ ಅಬಾರ್ಷನ್ ಮಾಡಿಕೊಳ್ಳಲು ಪ್ರಯತ್ನಿಸಿದ್ದಾಳೆ. ಏಕಾಏಕಿ ಹೊಟ್ಟೆ ನೋವು ಬಂದಿರುವುದರಿಂದ ಶೌಚಾಲಯಕ್ಕೆ ತೆರಳಿದ್ದಾಳೆ. ಶೌಚಾಲಯದಲ್ಲಿ ಮಗುವನ್ನು ಬಿಟ್ಟು ಹೋಗಿದ್ದಾಳೆ. ಸದ್ಯ ಆಫ್ರಿನಾ ಆಸ್ಪತ್ರೆಗೆ ದಾಖಲಾಗಿದ್ದಾಳೆ.

ಆಸ್ಪತ್ರೆಯಿಂದ ಬಿಡುಗಡೆಯಾದ ನಂತರ ಕಾನೂನು ಕ್ರಮ ಕೈಗೊಳ್ಳಲಾಗುವುದು. ಈ ಬಗ್ಗೆ ಕೆಲವೊಂದು ಅನುಮಾನಾಸ್ಪದ ಆಡಿಯೋಗಳು ವೈರಲ್ ಆಗಿದೆ. ಸುಳ್ಳು ಸುದ್ದಿ ಹಬ್ಬಿಸಿದವರ ಮೇಲೆ ಕ್ರಮ ಕೈಗೊಳ್ಳಲಾಗುವುದು ಎಂದರು.

0

ಕಾಮೆಂಟ್‌ಗಳಿಲ್ಲ

ಕಾಮೆಂಟ್‌‌ ಪೋಸ್ಟ್‌ ಮಾಡಿ

Mega Menu

blogger
© all rights reserved
made with by templateszoo